News Karnataka Kannada
Friday, April 26 2024
ತುಮಕೂರು

ಡಿ.ಕೆ ಶಿವಕುಮಾರ್ ಗೆ ಬಂಧನದ ಭೀತಿ, ಸಿದ್ದರಾಮಯ್ಯಗೆ ಸೋಲಿನ ಆತಂಕ: ಕಟೀಲ್‌

Congress has lost its strength: Nalin Kumar Kateel
Photo Credit : News Kannada

ತುಮಕೂರು: ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ಎದುರಿಸಲು ಶಸ್ತ್ರಾಸ್ತ್ರಗಳಿಲ್ಲದೇ ಶಕ್ತಿ ಕಳೆದುಕೊಂಡಿದೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌  ಕುಮಾರ್ ಕಟೀಲ್ ತಿಳಿಸಿದರು.

ನಗರದ ಬಿಜೆಪಿ‌ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿರುವ ನಾಯಕರು ಗೊಂದಲದಲ್ಲಿದ್ದಾರೆ. ಡಿ.ಕೆ ಶಿವಕುಮಾರ್ ಬಂಧನದ ಭೀತಿಯಲ್ಲಿ ಇದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಲಿನ ಭೀತಿಯಲ್ಲಿ ಇದ್ದಾರೆ. ಇನ್ನೂ ಕಾಂಗ್ರೆಸ್ ನ ರಾಷ್ಷ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಂಚಲ ಮನಸ್ಸು ಹೊಂದಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಲ್ಲಿ ಗೊಂದಲವನ್ನು ಸೃಷ್ಟಿ ಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗ್ಯಾರಂಟಿ ಇಲ್ಲ, ಇನ್ನೂ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಗ್ಯಾರಂಟಿ ಕಾರ್ಡ್ ಗಳಿಗೆ ಗ್ಯಾರಂಟಿ ಇರುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ದೇಶದಲ್ಲಿ ಅಭಿವೃದ್ಧಿಪರ,ಜನರು,ಕೂಲಿ ಕಾರ್ಮಿಕರು,ಬಡವರು,ರೈತರು ಸೇರಿದಂತೆ ಅಸಂಘಟಿತ ಕಾರ್ಮಿಕ ವರ್ಗದ ಅಭಿವೃದ್ಧಿಗೆ ಸೌಲಭ್ಯಗಳನ್ನು ಒದಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರಕಾರಕ್ಕೆ ಜನತೆ ಮನ್ನಣೆ ಕೊಡಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆ ನೆಡೆಯುತ್ತಿದ್ದು, ಈ ಬಾರಿ ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಆಯ್ಕೆ ಆಗುವ ಮೂಲಕ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಜಿ.ಎಸ್ ಬಾವರಾಜು,ಶಾಸಕ ಜಿ.ಬಿ ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಮುಂತಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು