ತುಮಕೂರು: ತಿಪಟೂರು ತಾಲೂಕಿನ ನೋಣವಿನಕೆರೆಯ ಸೋಮೇಕಟ್ಟೆ ಕಾಡಸಿದ್ದೇಶ್ವರ ಮಠಕ್ಕೆ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಆಗಮಿಸಿ ಶ್ರೀಮಠದ ಪೂಜ್ಯರಾದ ಡಾ. ಕರಿವೃಷಭ ದೇಶಿ ಕೇಂದ್ರ ಶಿವಯೋಗಿಶ್ವರ ಮಹಾಸ್ವಾಮೀಜಿಯವರ ಆಶೀರ್ವಾದವನ್ನು ಪಡೆದು ಹಿರಿಯ ಶ್ರೀಗಳ ಗದ್ದಿಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಕೆ.ಷಡಕ್ಷರಿ, ಕುಣಿಗಲ್ ರಂಗನಾಥ್, ಚೆಲುವರಾಯಸ್ವಾಮಿ, ಕಾಂಗ್ರೆಸ್ ವಕ್ತಾರ ವಿವೇಕ್ ಮೌರ್ಯ ಮತ್ತಿತರರು ಹಾಜರಿದ್ದರು.