News Kannada
Friday, June 09 2023
ತುಮಕೂರು

ತುಮಕೂರು ಜಿಲ್ಲೆಯಿಂದ ಸಚಿವರಾಗಿ ಡಾ.ಜಿ.ಪರಮೇಶ್ವರ್: ಇಂದು 8ಮಂದಿ ಸಚಿವರ ಪ್ರಮಾಣ ವಚನ

Dr G Parameshwara to take oath as minister from Tumakuru district today
Photo Credit : News Kannada

ತುಮಕೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜೊತೆಗೆ ಇಂದು 8 ಮಂದಿ ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್ ಅವರಿಗೆ ಮೊದಲ ಪಟ್ಟಿಯಲ್ಲೇ ಸಚಿವ ಸ್ಥಾನ ದೊರಕಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರುಗಳಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗರೆಡ್ಡಿ, ಮತ್ತು ಬಿ.ಝಡ್, ಜಮೀರ್ ಅಹ್ಮದ್ ಖಾನ್ ಅವರುಗಳು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

28 ಮಂದಿ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುವರು ಎಂದು ಹೇಳಲಾಗಿತ್ತು, ಆದರೆ 8 ಮಂದಿ ಹೆಸರನ್ನು ಮಾತ್ರ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ವಾರ ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ ಎನ್ನಲಾಗಿದೆ.

ತುಮಕೂರು ಜಿಲ್ಲೆಯಿಂದ ಡಾ.ಜಿ.ಪರಮೇಶ್ವರ್ ಅವರನ್ನು ಮೊದಲ ಪಟ್ಟಿಯಲ್ಲೇ ಸಚಿವರನ್ನಾಗಿ ಮಾಡಿದ್ದಾರೆ. ಡಾ.ಜಿ.ಪರಮೇಶ್ವರ್ ಅವರು ಪ್ರಣಾಳಿಕೆ ತಯಾರಿ ಸಮತಿ ಅಧ್ಯಕ್ಷರಾಗಿ ಬಹಳ ಪ್ರಮುಖ ಕಾರ್ಯ ಕೈಗೊಂಡಿದ್ದನ್ನು ಕಾಣಬಹುದು.

ಡಾ.ಜಿ.ಪರಮೇಶ್ವರ್ ಅವರು ಸಚಿವರಾಗುತ್ತಿರುವುದರಿಂದ ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.

See also  ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಘೋಷಿಸಿದ ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು