News Karnataka Kannada
Saturday, April 27 2024
ತುಮಕೂರು

ತುಮಕೂರು: ಗುಂಪುಗಳ ನಡುವೆ ಮಾರಾಮಾರಿ, ಹಲ್ಲೆಗೊಳಗಾಗಿದ್ದ ಯುವಕ ಸಾವು

A youth, who was attacked during a scuffle between groups, died.
Photo Credit : News Kannada

ತುಮಕೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ಸಂಘರ್ಷ ನಡೆದು ಘಟನೆಯಲ್ಲಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ನಡೆದಿದೆ.

ಜೂನ್ 3 ರಂದು ಜಿಲ್ಲೆಯ ತುರುವೇಕೆರೆ ಟೌನ್ ನಲ್ಲಿ ಹಲ್ಲೆ ಮಾಡಲಾಗಿದ್ದು ಹಲ್ಲೆಗೊಳಗಾಗಿದ್ದ ಯುವಕ ಮಾರಣಾಂತಿಕ ಗಾಯಗಳಿಂದ ಗಾಯಗೊಂಡಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಇನ್ನು ಮೃತಪಟ್ಟ ಯುವಕನನ್ನು ದಿಲೀಪ್ (22) ಎಂದು ಗುರುತಿಸಲಾಗಿದ್ದು ಮೃತ ಯುವಕ ತಿಪಟೂರು ತಾಲೂಕಿನ ತಡಸೂರು ಭೋವಿ ಕಾಲೋನಿಯ ಯುವಕ ದಿಲೀಪ್ ಕೆಲ ವರ್ಷಗಳಿಂದ ತುರುವೇಕೆರೆ ಟೌನ್ ದೇವೇಗೌಡ ಬಡಾವಣೆಯಲ್ಲಿ ಕುಟುಂಬ ಸಮೇತರಾಗಿ ವಾಸ ಮಾಡುತ್ತಿದ್ದನು.

ಗುರುವಾರ ಮಧ್ಯಾಹ್ನ ಬೆಳ್ಳೂರಿನ ಚುಂಚನಗಿರಿ ಆಸ್ಪತ್ರೆಯಲ್ಲಿ ದಿಲೀಪ್ ಮೃತಪಟ್ಟಿದ್ದು ಡ್ರೈವರ್ ವೃತ್ತಿ ಮಾಡುತ್ತಿದ್ದ ಎನ್ನಲಾಗಿದೆ.
ಇನ್ನು ದುಷ್ಕರ್ಮಿಗಳು ಗಲಾಟೆ ಮಾಡುವ ಸಂದರ್ಭದಲ್ಲಿ ಮೂರು ಬೈಕ್ ಗಳನ್ನು ಸುಟ್ಟು ಹಾಕಿದ್ದು ಘಟನೆಗೆ ಸಂಬಂಧಿಸಿದಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮಾರಣಾಂತಿಕ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನೂ ಸ್ಥಳೀಯರು ಮೋಬೈನಲ್ಲಿ ಸೆರೆಹಿಡಿದಿದ್ದು ಸಧ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆಯನ್ನು ಘಂಬೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು