News Karnataka Kannada
Saturday, April 20 2024
Cricket
ತುಮಕೂರು

ತುಮಕೂರು: ಅರಣ್ಯ ಮತ್ತು ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ – ಜಿಲ್ಲಾಧಿಕಾರಿ

Conservation of forests and animals is our responsibility: Deputy Commissioner
Photo Credit : News Kannada

ತುಮಕೂರು: ಮುಂದಿನ ಪೀಳಿಗೆಗೆ ಫೋಟೋದಲ್ಲಿ ಮಾತ್ರ ಹುಲಿ, ಸಿಂಹ, ಚಿರತೆಯನ್ನು ತೋರಿಸುವ ಪರಿಸ್ಥಿತಿಯನ್ನು ನಾವುಗಳು ತರಬಾರದು. ಆದುದರಿಂದ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತು ಅರಣ್ಯ ಮತ್ತು ಪ್ರಾಣಿಗಳ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಚಿರತೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಮಾನವ ಹಾಗೂ ಕಾಡುಪ್ರಾಣಿಗಳ ನಡುವೆ ಅಷ್ಟೇನು ಸಂಘರ್ಷವಿರಲಿಲ್ಲ. ಕಾಡು ಪ್ರಾಣಿಗಳ ವಾಸಸ್ಥಾನಕ್ಕೆ ಸಾಕಷ್ಟು ಸ್ಥಳಾವಕಾಶವಿತ್ತು. ಈ ಹಿಂದೆ ಮನುಷ್ಯರು ವಾಸಿಸುವ ಸ್ಥಾನಕ್ಕೆ ಅಪರೂಪಕ್ಕೆ ಕಾಡು ಪ್ರಾಣಿಗಳು ಲಗ್ಗೆ ಇಡುತ್ತಿದ್ದವು. ಆದರೆ ಈಗ ಕಾಡು ಪ್ರಾಣಿಗಳು ವಾಸಿಸುವ ಜಾಗಗಳ ಬಳಿ ಮಾನವ ಲಗ್ಗೆ ಇಡುತ್ತಿರುವ ಕಾರಣ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಪ್ರಕರಣಗಳು ಹೆಚ್ಚುತ್ತಿವೆ ಎಂದರು.

ಅಂತರಾಷ್ಟ್ರೀಯ ಚಿರತೆ ದಿನದ ಉದ್ದೇಶ ಚಿರತೆ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಜಾಗೃತಿ ನೀಡುವುದು ಆಗಿದೆ. ಎರಡನೆಯದಾಗಿ ಮಾನವ ಮತ್ತು ಪ್ರಾಣಿಗಳ ಸಂಘರ್ಷವನ್ನು ಕಡಿಮೆಗೊಳಿಸುವುದು ಹೇಗೆ ಎಂಬುವುದರ ಬಗ್ಗೆ ಬೆಳಕು ಚೆಲ್ಲುವುದು ಹಾಗೂ ಅರಣ್ಯವನ್ನು ಯಾವ ರೀತಿ ರಕ್ಷಣೆ ಮಾಡಬಹುದಾಗಿದೆ ಎಂಬುದರ ಕುರಿತು ಈ ದಿನಾಚರಣೆ ಬೆಳಕು ಚೆಲ್ಲಲಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಅರಣ್ಯ ಮತ್ತು ಪ್ರಾಣಿಗಳ ಕುರಿತು ಹೆಚ್ಚಿನ ಆಸಕ್ತಿವಹಿಸುತ್ತಿರುವುದು ಸಂತಸದ ವಿಷಯ. ಅರಣ್ಯ ಹಾಗೂ ಪ್ರಾಣಿಗಳ ರಕ್ಷಣೆ ಕುರಿತು ಮಕ್ಕಳಲ್ಲಿನ ಆಸಕ್ತಿ ಹೆಚ್ಚಾಗಬೇಕು ಎಂದರು.

ಅರಣ್ಯ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳುವವರು ಪರಿಸರವನ್ನು ಕಾಪಾಡುವ ಹೊಣೆಯನ್ನು ಹೊರಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ತ್ಯಾಜ್ಯವನ್ನು ಅರಣ್ಯ ಪ್ರದೇಶದಲ್ಲಿ ಸೃಷ್ಟಿಸಬಾರದು. ಇದೊಂದು ಗಂಭೀರ ವಿಷಯವಾಗಿದೆ. ಇದನ್ನು ಅರಿತು ನಾವೆಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು