News Kannada
ತುಮಕೂರು

ತುಮಕೂರು: ಹಿಂದುಳಿದ ತಾಲೂಕುಗಳಲ್ಲಿ ಟೋಲ್ ಪಡೆಯದಂತೆ ಕೆಎನ್‌ಆರ್ ಒತ್ತಾಯ

KNR urges people not to collect toll in backward taluks
Photo Credit : News Kannada

ತುಮಕೂರು: ಜಿಲ್ಲೆಯಲ್ಲಿ ನಂಜುಂಡಪ್ಪ ವರದಿ ಪ್ರಕಾರ ಅತಿ ಹಿಂದುಳಿದಿರುವ ತಾಲ್ಲೂಕುಗಳಾಗಿರುವ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ಜನರು ಸಂಚರಿಸುವ ರಾಜ್ಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಟೋಲ್‌ನಲ್ಲಿ ಸರ್ವೀಸ್ ರಸ್ತೆ ನಿರ್ಮಿಸದೆ ಶುಲ್ಕ ವಸೂಲಿ ಮಾಡಬಾರದು ಎಂದು ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರಟಗೆರೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಎರಡು ಟೋಲ್‌ಗಳನ್ನು ಸ್ಥಾಪಿಸಲಾಗಿದೆ. ಈ ಟೋಲ್‌ಗಳಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿರುವುದರಿಂದ ಮಧುಗಿರಿ, ಕೊರಟಗೆರೆ ಹಾಗೂ ಪಾವಗಡ ತಾಲ್ಲೂಕಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮಧುಗಿರಿ, ಕೊರಟಗೆರೆ ಹಾಗೂ ಪಾವಗಡ ಈ ಮೂರು ತಾಲ್ಲೂಕುಗಳು ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲ್ಲೂಕು ಎಂದು ನಮೂದಾಗಿದೆ. ಸರ್ಕಾರ ಟೋಲ್ ಹಾಕುವುದಾದರೆ ಪಕ್ಕದಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿ ಟೋಲ್ ಸ್ಥಾಪಿಸಬೇಕಾಗಿತ್ತು. ನಾವು ಓಡಾಡುವ ರಸ್ತೆಯಲ್ಲಿ ನಮಗೆ ಉಚಿತವಾಗಿ ಓಡಾಡುವ ಅವಕಾಶ ಇದ್ದೇ ಇರುತ್ತದೆ. ಸರ್ವೀಸ್ ರಸ್ತೆ ಮಾಡದೆ ಟೋಲ್ ಹಾಕಿರುವುದರಿಂದ ಈ ಭಾಗದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರೆ ಟೋಲ್ ತೆಗೆಸುತ್ತೇವೆ ಎಂದು ಜನರಿಗೆ ನಾನು, ಡಾ. ಜಿ. ಪರಮೇಶ್ವರ್ ಹಾಗೂ ವೆಂಕಟೇಶ್ ಅವರು ಮನವಿ ಮಾಡಿದ್ದೇವು. ಮೇ ೩೦ಕ್ಕೆ ಈ ಟೋಲ್‌ನಲ್ಲಿ ಹಣ ವಸೂಲಿ ಮಾಡುವ ಗುತ್ತಿಗೆ ಅವಧಿ ಮುಗಿಯುತ್ತಿದೆ. ಹಾಗಾಗಿ ಜೂನ್ ೧ ರಿಂದ ಮತ್ತೆ ಈ ಟೋಲ್‌ಗಳ ಗುತ್ತಿಗೆ ಅವಧಿಯನ್ನು ನವೀಕರಿಸಿ ಶುಲ್ಕ ವಸೂಲಿ ಮಾಡಬಾರದು ಎಂಬುದು ನಾನೂ ಸೇರಿದಂತೆ ಡಾ. ಜಿ. ಪರಮೇಶ್ವರ್, ವೆಂಕಟೇಶ್ ಅವರ ಒತ್ತಾಯವಾಗಿದೆ ಎಂದಿದ್ದಾರೆ.

ಒಂದು ವೇಳೆ ಟೋಲ್ ಹಾಕುವುದಾದರೆ ಸರ್ವೀಸ್ ರಸ್ತೆ ಮಾಡಿ ಹಾಕಿಕೊಳ್ಳಲಿ. ಇದಕ್ಕೆ ನಮ್ಮ ಅಡ್ಡಿಯಿಲ್ಲ. ಸರ್ವೀಸ್ ರಸ್ತೆ ನಿರ್ಮಿಸದೇ ಟೋಲ್ ಹಣ ವಸೂಲಿ ಮಾಡುವುದು ಅವೈಜ್ಞಾನಿಕ. ಹಾಗಾಗಿ ಜೂ. ೧ ರಿಂದ ಟೋಲ್‌ನಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಜನರ ಭಾವನೆಗಳಿಗೆ ಸ್ಪಂದಿಸದೆ ವ್ಯತಿರಿಕ್ತವಾಗಿ ನಡೆದರೆ ಅದಕ್ಕೆ ಜನರು ಅವರದೇ ಆದ ರೀತಿಯಲ್ಲಿ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಇದಕ್ಕೆ ನಾವ್ಯಾರು ಕಾರಣರಾಗುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದಿರುವ ಶಾಸಕ ಕೆ.ಎನ್. ರಾಜಣ್ಣ ಅವರು, ಜೂ. ೧ ರಿಂದ ಟೋಲ್ ಹಣವನ್ನು ಜನರಿಂದ ಪಾವತಿ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

See also  ಕಾರವಾರ: ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು