News Kannada
Saturday, June 03 2023
ತುಮಕೂರು

ತುಮಕೂರು: ತಿಪಟೂರಿನ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

KPCC president DK Shivakumar visits Kadasiddheswara Mutt in Tiptur
Photo Credit : News Kannada

ತುಮಕೂರು: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಭಾನುವಾರ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಸೋಮೆಕಟ್ಟೆಯ ಕಾಡು ಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದರು.

ಭಾನುವಾರ ತಮ್ಮ ಕುಟುಂಬ ಸದಸ್ಯರೊಂದಿಗೆ ಮಠಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಮಠದ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟ ಸಮಯದಲ್ಲಿ ಮಠಕೆ ಭೇಟಿ ನೀಡುವ ಡಿ.ಕೆ ಶಿವಕುಮಾರ್.ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇದೆ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡುತ್ತಿಲ್ಲ ಇನ್ನು ಅವರು ಮಠಕ್ಕೆ ಭಕ್ತರಾಗಿದ್ದು ಅವರು ತಮ್ಮ ಎಲ್ಲಾ ಸಂಕಷ್ಟ ಕಾಲದಲ್ಲೂ ಸಹ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುತ್ತಾರೆ.

ಇನ್ನು ಸಿಎಂ ರೇಸ್ ನಲ್ಲಿ ಪ್ರಮುಖರಾಗಿರುವ ಡಿ.ಕೆ ಶಿವಕುಮಾರ್ ಅವರು ತಾವು ಸಹ ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮಠಕ್ಕೆ ಬೇಟಿ ನೀಡಿದ್ದು ತೀವ್ರ ಸಂಚಲನಕ್ಕೆ ಕಾರಣವಾಗಿದೆ.

See also  ತುಮಕೂರು: ಟಿವಿಎಸ್ ಮೊಪೆಡ್‌ಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು