News Karnataka Kannada
Thursday, March 28 2024
Cricket
ತುಮಕೂರು

ತುಮಕೂರು: ಎವಿಇಎಸ್ ಮತದಾರರಿಗಾಗಿ ಇಂದಿನಿಂದ ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪನೆ

Tumakuru: Postal Voting Centre to be set up for AVES voters from today
Photo Credit : News Kannada

ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಯಲ್ಲಿರುವ ಗೈರು ಮತದಾರ(ಎವಿಇಎಸ್-ಅಗತ್ಯ ಸೇವೆಯಲ್ಲಿ ಗೈರುಹಾಜರಿ ಮತದಾರರು)ರಿಗಾಗಿ ಅಂಚೆ ಮೂಲಕ ಮತದಾನ ಮಾಡಲು ಅನುವಾಗುವಂತೆ ಮೇ 2 ರಿಂದ ೪ರವರೆಗೆ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್(ಪಿವಿಸಿ) ಅನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಿರುವ ಬಗ್ಗೆ ಎಲ್ಲ ಎವಿಇಎಸ್ ಮತದಾರರಿಗೆ ಎಸ್.ಎಂ.ಎಸ್. ಮೂಲಕ ಕಡ್ಡಾಯವಾಗಿ ಮಾಹಿತಿ ನೀಡಬೇಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬೆಸೈಟ್‌ನಲ್ಲಿ ಪ್ರಚುರಪಡಿಸಬೇಕು ಎಂದರು.

ಎಲ್ಲ ಎವಿಇಎಸ್ ಮತದಾರರಿಗೆ ಪಿವಿಸಿ ಸ್ಥಾಪನೆಯ ಸ್ಥಳ, ವಿಳಾಸ, ದಿನಾಂಕ, ಸಮಯದ ಮಾಹಿತಿಯನ್ನು ಎಸ್.ಎಂ.ಎಸ್. ಮೂಲಕ ತಿಳಿಸಬೇಕು. ಪಿವಿ ಸೆಂಟರ್‌ನಲ್ಲಿ ಅಂಚೆ ಮತದಾನ ಮಾಡಲು ಮೇ ೨ ರಿಂದ ೪ರವರೆಗೆ ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ. ಅಂಚೆ ಮತದಾನಕ್ಕಾಗಿ ನಮೂನೆ- ೧೨ಡಿಯನ್ನು ಭರ್ತಿ ಮಾಡಿ ಸಲ್ಲಿಸಿದ ಎವಿಇಎಸ್ ಸಿಬ್ಬಂದಿಗಳು ಕೇವಲ ಈ ಪಿವಿಸಿ(ಅಂಚೆ ಮತದಾನ ಕೇಂದ್ರದಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶವಿರುತ್ತದೆ. ಉಳಿದಂತೆ ಬೇರೆ ಯಾವ ಕ್ರಮದಲ್ಲಿಯೂ ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂಬುದನ್ನು ಕಡ್ಡಾಯವಾಗಿ ತಿಳಿಸಬೇಕು ಎಂದು ತಿಳಿಸಿದರು.

ಪೋಸ್ಟಲ್ ವೋಟಿಂಗ್ ನಡೆಯುವ ದಿನಾಂಕವನ್ನು ಚುನಾವಣಾ ಅಭ್ಯರ್ಥಿಗಳಿಗೆ ಮಾಹಿತಿ ನೀಡಬೇಕು. ಅಂಚೆ ಮತದಾನ ನಡೆಯುವ ವಿಧಾನವನ್ನು ಅಭ್ಯರ್ಥಿ ಅಥವಾ ಅವರ ಏಜೆಂಟ್‌ಗಳಿಗೆ ವೀಕ್ಷಿಸಲು ಅವಕಾಶವಿರುತ್ತದೆ ಎಂದು ಹೇಳಿದರು. ಅಂಚೆ ಮತದಾನ ಕೇಂದ್ರದಲ್ಲಿ ಮತದಾರರಿಗೆ ಅಂಚೆ ಮತಪತ್ರ, ಮತದಾನಕ್ಕೆ ಸಂಬಂಧಿಸಿದಂತೆ ೧೩ಎ, ೧೩ಬಿ, ೧೩ಸಿ ಇತರೆ ಲಕೋಟೆಗಳನ್ನು ನೀಡಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ನಿಯೋಜಿತ ಸಿಬ್ಬಂದಿಗಳು ಮತದಾರನ ಗುರುತು ಪತ್ರ(ಚುನಾವಣಾ ಆಯೋಗ ಸೂಚಿಸಿರುವ ದಾಖಲೆಗಳ ಪೈಕಿ) ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪಟ್ಟಿಯನ್ನು ದೊಡ್ಡ ಕಾರ್ಡ್ ಬೋರ್ಡ್‌ನಲ್ಲಿ ಲಗತ್ತಿಸಿ ಮತದಾನ ಕೇಂದ್ರದ ಹೊರಗಡೆ ಇಡಬೇಕು.

ಪಿವಿಸಿ ಕೇಂದ್ರದಲ್ಲಿ ಎವಿಇಎಸ್ ಮತದಾರರ ಸಂಖ್ಯೆಗನುಗುಣವಾಗಿ  ಹೆಚ್ಚುವರಿ ಅಂಚೆ ಮತಪತ್ರಗಳು, ಅಗತ್ಯ ಲಕೋಟೆಗಳು, ನೇರಳೆ ಬಣ್ಣದ ಸ್ಕೆಚ್ ಪೆನ್, ಗೋಂದು ಬಾಟಲಿ, ಸೆಲ್ಫ್ ಇಂಕಿಂಗ್ ಪ್ಯಾಡ್, ಸ್ಟೀಲ್ ಟ್ರಂಕ್, ಅವಶ್ಯಕ ರಿಜಿಸ್ಟರ್, ವೋಟಿಂಗ್ ಕಂಪಾಟ್ಮೆಂಟ್, ಎವಿಇಎಸ್ ಮತದಾರರ ಪಟ್ಟಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಹೊಂದಿರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ದರ್ಶನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್, ತಹಶೀಲ್ದಾರ್ ಸಿದ್ದೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು