ತುಮಕೂರು : ತಡ ರಾತ್ರಿ ಸುರಿದ ಬಾರಿ ಮಳೆಗೆ ತುಮಕೂರು ನಗರದ ಮದ್ಯಭಾಗದಲ್ಲಿರುಗ ಶೆಟ್ಟಿಹಳ್ಳಿ ಅಂಡರ್ ಪಾಸ್ ತುಂಬ ನೀರು ತುಂಬಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ನಗರದ ಶೆಟ್ಟಿಹಳ್ಳಿ ಅಂಡರ್ ಪಾಸ್ನಲ್ಲಿ ಆರಡಿಗೂ ಹೆಚ್ಚು ನೀರು ನಿಂತು ಕೆರೆಯಂತಾಗಿದೆ, ಬೆಳಗಿನ ವೇಳೆಯಲ್ಲಿ ಕಾಲೇಜಿಗೆ ಹೋಗುವವರಿಗೆ, ಕಛೇರಿಗೆ ಹೋಗುವವರಿಗೆ ತೀವ್ರ ತೊಂದರೆ ಉಂಟಾಗಿದೆ.
ಎಸ್.ಐ.ಟಿ ಮತ್ತು ಎಸ್.ಎಸ್.ಪುರಂ ತಗ್ಗಿನ ಮನೆಗಳಿಗೆ ನೀರು ನುಗ್ಗಿ ಪರದಾಡುವಂತಾಗಿದೆ.ಸ್ಮಾರ್ಟ್ ಸಿಟಿಯೆಂದು ಕರೆಸಿಕೊಳ್ಳುತ್ತಿರುವ ತುಮಕೂರಿಗೆ ಸ್ಮಾರ್ಟ್ ಸಿಟಿ ಯೋಜನೆಗಳು ಜಾರಿಯಾದ ಮೇಲೆ ಪ್ರತಿ ವರ್ಷ ಮಳೆ ಪ್ರಾರಂಭವಾದ ಕೂಡಲೇ ಹಲವಾರು ಸಮಸ್ಯೆಗಳು ದುತ್ತನೆ ಎದುರಾಗುತ್ತಿವೆ. ವರ್ಷದ ಮೊದಲ ಮಳೆಗೆ ಶೆಟ್ಟಿಹಳ್ಳಿ ಅಂಡರ್ ಪಾಸ್ ಮತ್ತು ಕೋತಿ ತೋಪಿನಲ್ಲಿ ಕೆರೆಯಂತೆ ನೀರು ನಿಂತಿವೆ.
ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗಿರುವ ಈ ಅಂಡರ್ ಪಾಸ್, ನಿರ್ಮಾಣವಾದ ಮೇಲೆ ನನಗೂ, ಅಂಡರ್ ಪಾಸ್ಗೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ. ಪ್ರಾರಂಭದಲ್ಲೇ ಈ ರೀತಿಯಾಗಿದ್ದು ಮಳೆಗಾಲ ಪ್ರಾರಂಭಕ್ಕೂ ಮುನ್ನ ಎಚ್ಚತ್ತು, ಶೆಟ್ಟಿಹಳ್ಳಿ, ಮಾರುತಿನಗರ, ನೃಪತುಂಗ ಬಡಾವಣೆ, ಜಯನಗರ, ಬಡಾವಣೆಗಳ ಜನರ ಬವಣೆಯನ್ನು ಈಗಲಾದರೂ ಸಂಬಂಧಪಟ್ಟವರು ಗಮನಿಸಿ ಅಂಡರ್ ಪಾಸ್ನಲ್ಲಿ ನೀರು ನಿಲ್ಲದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ.