News Kannada
Friday, March 24 2023

ಕಲಬುರಗಿ

ಅರಶಿಣ ಗಣೇಶ ಅಭಿಯಾನ: ವೆಬ್‍ಸೈಟ್‍ದಲ್ಲಿ ಅಪ್ಲೋಡ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿರಿ

Photo Credit :

ಕಲಬುರಗಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಸಕ್ತ ಸಾಲಿನಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿಸಲು ಅರಶಿನ ಗಣೇಶ ಅಭಿಯಾನವನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಅರಶಿನ ಗಣೇಶ ವಿಗ್ರಹದ ಫೋಟೋವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‍ಸೈಟ್‍ನಲ್ಲಿ ಅಪಲೋಡ್ ಮಾಡಿ ಆಕರ್ಷಕ ಬಹುಮಾನವನ್ನು ಗೆಲ್ಲಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು 10 ಲಕ್ಷ ಅರಶಿನ ಗಣೇಶ ತಯಾರಿಕಾ ಅಭಿಯಾನ-2021ರ ಈ ವಿಶ್ವ ದಾಖಲೆಯ ಪ್ರಯತ್ನಕ್ಕೆ ಕೈಜೋಡಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳ ತಯಾರಿಕೆ ಮತ್ತು ಬಳಕೆಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿಷೇಧಿಸಿದ್ದು, ಈ ಕುರಿತು ಉಚ್ಛ ನ್ಯಾಯಾಲಯದ ನಿರ್ದೇಶನ ಕೂಡ ಇರುತ್ತದೆ.

ಕೋವಿಡ್-19 ಹಿನ್ನೆಲ್ಲೆ ಸ್ವಚ್ಛತೆ ಕಾಪಾಡುವುದು ಬಹುಮುಖ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಡಳಿಯು ಅಭಿಯಾನ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ರೋಗ ನಿರೋಧಕ ಶಕ್ತಿಯುಳ್ಳ ಅರಶಿನ ಮಿಶ್ರಿತವಾದ ಗೋಧಿ ಹಿಟ್ಟು ಮತ್ತು ರಾಗಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶ ವಿಗ್ರಹವನ್ನು ಮನೆಯಲ್ಲಿಯೇ ತಯಾರಿಸಿ ಪೂಜಿಸಿ ಮನೆಯಲ್ಲಿಯೇ ವಿಸರ್ಜಿಸುವ ಮೂಲಕ ಪರಿಸರ ಮತ್ತು ಜಲ ಮೂಲಗಳ ಮಾಲಿನ್ಯ ತಡೆಗಟ್ಟಬಹುದಾಗಿದೆ. ಹಬ್ಬದ ಸಮಯದಲ್ಲಿ ಸಾರ್ವಜನಿಕರು ಸ್ವಚ್ಛ ಪರಿಸರವನ್ನು ಕಾಪಾಡಬೇಕೆಂದು ಅವರು ತಿಳಿಸಿದ್ದಾರೆ.

See also  ಸಚಿವ ಮುರುಗೇಶ ನಿರಾಣಿ ಅವರಿಂದ ಕಲಬುರಗಿ ಕೋಟೆ ವೀಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು