ಬೀದರ್: ಒಂದಲ್ಲ ಎರಡಲ್ಲ ಬರೋಬ್ಬರಿ 17 ಜನರಿಗೆ ಹುಚ್ಚು ನಾಯಿ ಕಚ್ಚಿರುವಂತ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಎರಡು ದಿನದಿಂದ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಮನುಷ್ಯರು ಮಾತ್ರವಲ್ಲ ಹಸು, ಎಮ್ಮೆಗಳಿಗೂ ಕಚ್ಚಿದೆ. ಹೀಗಾಗಿ ಗ್ರಾಮಸ್ಥರೆಲ್ಲ ಭಯದಿಂದಾನೇ ಕಾಲ ಕಳೆಯುತ್ತಿದ್ದಾರೆ. ಈಗಾಗಲೇ ಆಸ್ಪತ್ರೆಯ ಬೆಡ್ ಗಳು ತುಂಬಿವೆ.
ಎರಡು ದಿನದಿಂದ ಈ ರೀತಿಯ ಸಮಸ್ಯೆ ಎದುರಾಗಿದ್ರು ಕೂಡ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ. ಜನರು ಮನೆಯಿಂದ ಹೊರಗೆ ಬರುವುದಕ್ಕೆ ಭಯ ಪಡುತ್ತಿದ್ದಾರೆ. ಸದ್ಯ ಗಾಯಾಳುಗಳು ಬಸವ ಕಲ್ಯಾಣ ಆಸ್ಪತ್ರೆಗೆ ದಾಖಲಾಗಿದ್ದಾರೆ.