News Kannada
Monday, December 11 2023
ಬೀದರ್

ಬೀದರ್: ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನೊಳಗೆ ತೀರ್ಮಾನ –  ಬೊಮ್ಮಾಯಿ

New Project 53
Photo Credit : News Kannada

ಬೀದರ್ : ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಪರಿಶೀಲಿಸಿ ಸಂವಿಧಾನತ್ಮಕವಾಗಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಲ್ಲೂರು ಗ್ರಾಮಕ್ಕೆ ಆಗಮಿಸಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಆದಿಚುಂಚನಗಿರಿ ಮಠದ ಪೂಜ್ಯ ನಿರ್ಮಲಾನಂದ ಸ್ವಾಮೀಜಿಗಳೂ ಕೂಡ ಮೀಸಲಾತಿ ಹೆಚ್ಚಿಸಬೇಕೆಂಬ ಬಗ್ಗೆ ಮಾತನಾಡಿರುವುದಕ್ಕೆ ಪ್ರತಿಕ್ರಯಿಸಿ, ಎಲ್ಲ ಸಮುದಾಯಗಳ ಆಶೋತ್ತರಗಳು ಹೆಚ್ಚಿದ್ದು, ಎಲ್ಲರಿಗೂ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮುಂದೆ ಬರಬೇಕೆಂಬ ಆಶಯ ಇರುತ್ತದೆ ಎಂದರು.

ಸಿಪೆಟ್ ಯೋಜನೆಗೆ ರಾಜ್ಯ ಸರ್ಕಾರದ ಸಹಕಾರ :

ಕೇಂದ್ರ ಆರೋಗ್ಯ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ ಸುಖ್ ಮಾಂಡವೀಯ, ಕೇಂದ್ರ ನವೀಕರಿಸಬಹುದಾದ ಇಂಧನ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನೇತೃತ್ವದಲ್ಲಿ ಸಿಪೆಟ್ ಯೋಜನೆಯ ಸೆಂಟರ್ ಆಫ್ ಎಕ್ಸ್ ಲೆನ್ಸ್ ಕೇಂದ್ರ ಬೀದರ್ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವುದು ಸಂತೋಷದ ವಿಷಯ. ಈ ಯೋಜನೆಗೆ ಬೇಕಾದ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿರುವಂತೆ ಕಾಮಗಾರಿಯು ಪ್ರಾರಂಭವಾಗುತ್ತಿದೆ. ಇದಕ್ಕಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರುಗಳನ್ನು ಅಭಿನಂದಿಸುತ್ತೇನೆ ಎಂದರು.

ಜನಸಂಕಲ್ಪ ಯಾತ್ರೆಯಲ್ಲಿ ಜನರ ಉತ್ಸಾಹ ಕಾಣುತ್ತಿದೆ :

ಇಂದು ಬೀದರ್ ನ ಔರಾದ್ ಹಾಗೂ ಹುಮ್ನಾಬಾದ್ ನಲ್ಲಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗುತ್ತಿದ್ದು, ಬೃಹತ್ ಪ್ರಮಾಣ ಜನರು ಈ ಕಾರ್ಯಕ್ರಮಕ್ಕೆ ಸ್ಪಂದನೆಯನ್ನು ತೋರುತ್ತಿದ್ದಾರೆ. ಕಳೆದ ವಾರ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜನಸಂಕಲ್ಪ ಯಾತ್ರೆ ಕೈಗೊಂಡಾಗ ಅಭೂತಪೂರ್ವ ಜನಬೆಂಬಲ ದೊರಕಿತ್ತು. ಜನಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗುತ್ತಿರುವ ಜನರ ಉತ್ಸಾಹವನ್ನು ನೋಡಿದರೆ ಈ ಯಾತ್ರೆ ವಿಜಯಯಾತ್ರೆ ಯಾಗುವ ಎಲ್ಲ ಲಕ್ಷಣಗಳೂ ಕಂಡುಬರುತ್ತಿದೆ.

ಸಿದ್ದರಾಮಯ್ಯನವರು ಬಿಜೆಪಿ, ಆರ್ ಎಸ್ ಎಸ್ ಬಳಸದೇ ಭಾಷಣ ಮಾಡಲಿ :

ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಹೆಸರು ಬಳಸದೇ ಮುಖ್ಯಮಂತ್ರಿಗಳು ಭಾಷಣ ಮಾಡಲು ಸಾಧ್ಯವೇ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಭಾಷಣದಲ್ಲಿ ಯಾರಬಗ್ಗೆ ಮಾತನಾಡಬೇಕು ಎಂಬ ಬಗ್ಗೆ ನನಗೆ ತಿಳಿದಿದೆ. ಆದರೆ ಸಿದ್ದರಾಮಯ್ಯನವರು ಬಿಜೆಪಿ, ಆರ್ ಎಸ್ ಎಸ್, ಬೊಮ್ಮಾಯಿ ಎಂಬ ಬಗ್ಗೆ ಪ್ರಸ್ತಾಪಿಸದೇ ಭಾಷಣ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು.

See also  ಕಾರವಾರ: ಜೆಸಿಬಿಯಿಂದ ಗುಡಿಸಲಿಗೆ ಹಾನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು