News Kannada
Sunday, September 24 2023
ಬೀದರ್

ಬೀದರ್: ಸ್ಯಾಂಟ್ರೊ ರವಿ ಪ್ರಕರಣ, ಗೃಹ ಸಚಿವರ ಮನೆಯಲ್ಲೇ ಹಣ ಎಣಿಕೆ – ಕುಮಾರಸ್ವಾಮಿ

Jd(S) attacks construction of community hall with temple money
Photo Credit : News Kannada

ಬೀದರ್: ‘ಎಸಿಪಿ ಒಬ್ಬರ ವರ್ಗಾವಣೆ ಮಾಡಿಸಲು ಸ್ಯಾಂಟ್ರೊ ರವಿ ಮಧ್ಯಸ್ಥಿಕೆಯಲ್ಲಿ ₹ 15 ಲಕ್ಷ ಹಣಕ್ಕೆ ವ್ಯವಹಾರ ಕುದುರಿಸಲಾಗಿದೆ. ಗೃಹ ಸಚಿವರ ಮನೆಯಲ್ಲೇ ಹಣ ಎಣಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ತನಿಖೆ ನಡೆಸಲಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಹುಮನಾಬಾದ್ ತಾಲ್ಲೂಕಿನ ರಾಜೇಶ್ವರ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ಯಾಂಟ್ರೊ ರವಿಯನ್ನು ಹಿಡಿಯುವುದು ಸರ್ಕಾರದ ಕೆಲಸ. ಎಲ್ಲಾ ನಾವೇ ಹೇಳುವುದಾದರೆ ಗೃಹ ಸಚಿವರು ಏತಕ್ಕೆ ಇರಬೇಕು’ ಎಂದರು.

‘ದಾಖಲೆ ಇದ್ದರೆ ಕೊಡಿ ಎನ್ನುತ್ತಿದ್ದಾರೆ. ಹೀಗೆ ಹೇಳುವ ಮೂಲಕ ಪ್ರಕರಣವನ್ನು ಹಳ್ಳ ಹಿಡಿಸಲು ಯತ್ನಿಸುತ್ತಿದ್ದಾರೆ. ದಲ್ಲಾಳಿಗಳೇ ಸರ್ಕಾರದ ಆಡಳಿತ ನಡೆಸುವ ಸ್ಥಿತಿಯನ್ನು ಸಿ.ಎಂ ಸೃಷ್ಟಿ ಮಾಡಿಕೊಂಡಿದ್ದಾರೆ. ಕುಮಾರಕೃಪ ಹೊಸ ಕಟ್ಟಡದಲ್ಲಿ ಏನೆಲ್ಲಾ ನಡೆಯಿತು? ಬೆಂಕಿ ಇಲ್ಲದೆ ಹೊಗೆ ಬರುತ್ತಾ? ನಿಮ್ಮ ತಂದೆಯವರು ಹೇಳಿಕೊಟ್ಟಿದ್ದು ಇದೇನಾ? ಎಂದು ಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿದರು.

See also  ಬೀದರ್: ಹಿಂದುಳಿದ ಜಾತಿಯ ‌ಹೆಸರು ಹೇಳಿಕೊಂಡು ಸಿದ್ದರಾಮಯ್ಯ ರಾಜಕೀಯ ‌ಮಾಡುತ್ತಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು