News Kannada
Tuesday, May 30 2023
ಬೀದರ್

ಔರಾದ: ಸುಗಮ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಕರವೇ ಒತ್ತಾಯ

Aurad: Karve demands smooth bus services
Photo Credit : News Kannada

ಔರಾದ: ಔರಾದ್ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ವತಿಯಿಂದ ತಾಲೂಕಿನಾದ್ಯಂತ ಸಮಯಕ್ಕೆ ಸರಿಯಾಗಿ ಬಸ್ ಸಂಚಾರಕ್ಕೆ ಆಗ್ರಹಿಸಿ ಬಸ್ ನಿಲ್ದಾಣದ ಎದುರಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರವೇ ತಾಲೂಕು ಅಧ್ಯಕ್ಷ ಅನಿಲ್ ದೇವಕತೆ ಮಾತನಾಡಿ, ಬಸ್ ಪಾಸ್ ಹೊಂದಿರುವ ಮಕ್ಕಳಿಗೆ, ಸಾರ್ವಜನಿಕರಿಗೆ ಸಂಚಾರಕ್ಕೆ ಅನಾನುಕೂಲ ಆಗದಿರಲಿ, ಹಳೆ ಬಸ್ ಗಳ ಬದಲಿಗೆ ಹೊಸ ಬಸ್ ಗಳ ವ್ಯವಸ್ಥೆ ಮಾಡುಬೇಕು, ನಿಲ್ದಾಣವು ಸದಾ ಸ್ವಚ್ಛತೆಯಿಂದ ಕೂಡಿರಬೇಕು. ಗಡಿ ಭಾಗದಲ್ಲಿ ಹಳ್ಳಿ ಮತ್ತು ತಾಂಡಗಳಿಗೆ ಬಸ್ ವ್ಯವಸ್ಥೆ ಮಾಡುಬೇಕು ಮತ್ತು ದೂರದ ಮುಂಬೈ, ಬೆಂಗಳೂರು ಕಲಬುರ್ಗಿ, ಹೈದರಾಬಾದ್ ನಗರಗಳಿಗೆ ತೆರಲು ಉತ್ತಮ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.

ಕರವೇ ಗೌರವಾಧ್ಯಕ್ಷ ಬಸವರಾಜ್ ಶಟ್ಕರ್ ಮಾತನಾಡಿ, ಹಲವು ಸಲ ವ್ಯವಸ್ಥಾಪಕರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಕೋವಿಡ್ ಸಂದರ್ಭದಿಂದ ಇಲ್ಲಿಯವರೆಗೂ ಯಾವ ಗ್ರಾಮಕ್ಕೂ ಸಮರ್ಪಕವಾಗಿ ಬಸ್ ಸಂಚಾರ ವಿಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆದ ಹಿನ್ನಲೆ ಕೆಲಕಾಲ ಬಸ್ ಗಳ ಸಂಚಾರ ಸ್ಥಗಿತ ವಾಗಿತ್ತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ನರಸಿಂಗ ಹಕ್ಕೆ, ಅರ್ಜುನ್ ಭಂಗೆ, ನವೀನ್ ರೆಡ್ಡಿ, ವಿಲ್ಸನ್, ಕೃಷ್ಣ, ಬಾಬು ರಾಠೋಡ್ ಸೇರಿದಂತೆ ವಿವಿಧ ಶಾಲಾ ಕಾಲೇಜಿನ ಮಕ್ಕಳು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

See also  ಬೀದರ್ ಉತ್ಸವ-2023ಕ್ಕೆ ಅದ್ದೂರಿ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು