News Kannada
Sunday, September 24 2023
ಬೀದರ್

ಔರಾದ: ಪರಿಸರ ಉಳಿಸಲು ಶ್ರಮದಾನ ಶಿಬಿರದಲ್ಲಿ ಭಾಗವಹಿಸಿ ಎಂದ ಬಸವರಾಜ್ ಸ್ವಾಮಿ

Participate in shramdaan camp to save environment, says Basavaraj Swamy
Photo Credit : News Kannada

ಔರಾದ: ನಾವು ನಮ್ಮ ಪರಿಸರ ಉಳಿಸಬೇಕಾದರೆ ಶ್ರಮದಾನ ಶಿಬಿರದಲ್ಲಿ ಭಾಗವಹಿಸಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂದು ಹಿರಿಯ ಸಾಹಿತಿ ಬಸವರಾಜ ಸ್ವಾಮಿ ತಿಳಿಸಿದರು.

ಔರಾದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಬೀದರ್, ಸುಭಾಷ್ ಚಂದ್ರ ಬೋಸ್ ಯುವಕ ಸಂಘ ಔರಾದ ವತಿಯಿಂದ ನಡೆದ ಶ್ರಮದಾನ ಶಿಬಿರ ಉದ್ಘಾಟನೆ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಓಂಪ್ರಕಾಶ್ ದಡ್ಡೆ ಮಾತನಾಡಿ, ಶ್ರಮದಾನ ಶಿಬಿರ ಮೂರು ದಿವಸಗಳ ಕಾಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಯುವಕರು ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸಿಬೇಕು ಎಂದರು.

ಈ ಸಂದರ್ಭದಲ್ಲಿ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನೀಲ್ ಕುಮಾರ್ ಮೇಲದೊಡ್ಡಿ, ಪಪಂ ಅಧಿಕಾರಿ ಶಾಮ್ ಕುಮಾರ್, ರಾಹುಲ್ ಜಾಧವ ಉಪಸ್ಥಿತರಿದ್ದರು.

See also  ಇಸ್ರೋದ ನೆಕ್ಸ್ಟ್-ಜೆನ್ ಲಾಂಚ್ ವೆಹಿಕಲ್ ಮಹತ್ವದ ಪಾತ್ರ, ಪಿ.ಎಸ್.ಎಲ್.ವಿ ಗೆ ಮುಕ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು