News Kannada
Sunday, October 01 2023
ಬೀದರ್

ಬೀದರ್‌: ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ನಾನೇ ಪಶು ಸಂಗೋಪನೆ ಸಚಿವ- ಶಾಸಕ ರಹೀಂ ಖಾನ್‌

I will be animal husbandry minister if BJP doesn't come to power: Rahim Khan
Photo Credit : News Kannada

ಬೀದರ್‌: ‘ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಕಾಂಗ್ರೆಸ್‌ ನಿಶ್ಚಿತವಾಗಿಯೂ ಅಧಿಕಾರಕ್ಕೆ ಬರಲಿದೆ. ನಾನೇ ಪಶು ಸಂಗೋಪನೆ ಸಚಿವನಾಗಲಿದ್ದೇನೆ’ ಎಂದು ಶಾಸಕ ರಹೀಂ ಖಾನ್‌ ಹೇಳಿದರು.

ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಮಂಜೂರಾದ ‘ಪಶು ಸಂಜೀವಿನಿ’ ಸಂಚಾರಿ ಪಶು ಚಿಕಿತ್ಸಾ ಘಟಕಗಳ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ.ಬಾಬಾಸಾಹೇಬ ಅಂಬೇಡ್ಕರ್‌ ಬರೆದ ಸಂವಿಧಾನದ ಫಲವಾಗಿ ಕೆಳ ಸಮುದಾಯದವರು ಸಚಿವರಾಗಲು ಸಾಧ್ಯವಾಗಿದೆ.

ಇಲ್ಲದೇ ಹೋದರೆ ಮೇಲ್ವರ್ಗದವರೇ ಅಧಿಕಾರ ಅನುಭವಿಸುತ್ತಿದ್ದರು. ರಾಜನ ಮಗ ಮಾತ್ರ ರಾಜ, ಮಂತ್ರಿಯ ಮಗ ಮಂತ್ರಿ ಆಗುತ್ತಿದ್ದ. ಆದರೆ, ಈಗ ಜನರು ಬಯಸಿದರೆ ಯಾರು ಬೇಕಾದರೂ ಮಂತ್ರಿಯಾಗಬಹುದು’ ಎಂದರು.

ಇದಕ್ಕೂ ಮೊದಲು ಮಾತನಾಡಿದ ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ‘ಯಡಿಯೂರಪ್ಪ ಸರ್ಕಾರದಲ್ಲಿ ಪಶು ಸಂಗೋಪನೆ ಸಚಿವನಾಗಿದ್ದೆ. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲೂ ಪಶು ಸಂಗೋಪನೆ ಸಚಿವನಾಗಿದ್ದೇನೆ. ಮುಂದಿನ ಸರ್ಕಾರದಲ್ಲೂ ಪಶು ಸಂಗೋಪನೆ ಸಚಿವನಾಗಿಯೇ ಮುಂದುವರಿಯುವೆ’ ಎಂದು ಹೇಳಿದರು.

‘ಪಶು ಸಂಗೋಪನೆ ಇಲಾಖೆಯ ಮೂಲಕ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಗೋಮಾತೆ ಸೇವೆ ಸಲ್ಲಿಸುತ್ತಿರುವ ನಾನು ಪಶು ಸಂಗೋಪನೆ ಸಚಿವನೂ ಆಗಲಿದ್ದೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

See also  ತುಮಕೂರು: ತನಿಖೆ ವೇಳೆ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು