News Kannada
Monday, October 02 2023
ಬೀದರ್

ಬೀದರ್: ನೂತನ ಅನುಭವ ಮಂಟಪ ನಾನೇ ಉದ್ಘಾಟನೆ ಮಾಡುತ್ತೇನೆ ಎಂದ ಸಿದ್ದರಾಮಯ್ಯ

I will inaugurate the new Anubhava Mandapam, says Siddaramaiah
Photo Credit : News Kannada

ಬೀದರ್: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಬಸವ ಕಲ್ಯಾಣದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಅನುಭವ ಮಂಟಪನ್ನು ನಾನೇ ಉದ್ಘಾಟನೆ‌ ನೆರವೇರಿಸಲಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.

ಬಸವಕಲ್ಯಾಣದಲ್ಲಿ ಶುಕ್ರವಾರ ಅನುಭವ ಮಂಟಪದಲ್ಲಿ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ನಾನು ಮುಖ್ಯ ಮಂತ್ರಿಯಾಗಿದ್ದಾಗ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ರೂಪರೇಷ ಸಿದ್ಧಪಡಿಸಿ ಬಜೆಟ್ ನಲ್ಲಿ ಪೂರಕ ಅನುದಾನ ಸಹ ಮೀಸಲಿಟ್ಟಿದ್ದೆ. ಆದರೆ, ನಂತರ ಸರ್ಕಾರ ಹೋಯಿತು. ಅನುಭವ ಮಂಟಪ ಉದ್ಘಾಟನೆ ‌ಮಾಡಿದರೆ ನನಗೆ ಪುಣ್ಯ ಬರುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ನಾನು ಬಸವ ಜಯಂತಿ ದಿನದಂದು ಪ್ರಮಾಣ ವಚನ ಸ್ವೀಕರಿಸಿದ್ದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಒಂದೆರಡು ಗಂಟೆಯಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ದಾಸೋಹದ ಪರಿಕಲ್ಪನೆ, ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಬೇಕೆಂಬುದು ನಮ್ಮ ಆಶಯವಾಗಿತ್ತು ಎಂದರು.

ನಾನು‌ ಬಸವಾದಿ ಶರಣರ ತತ್ವದ ಮೇಲೆ ನಂಬಿಕೆಯಿಟ್ಟವನು. ಎಲ್ಲರಿಗೂ ಸಮಾನ ಹಕ್ಕು, ಅವಕಾಶಗಳು ಇರಬೇಕು ಎಂಬುದು ನನ್ನ ಸಿದ್ಧಾಂತವಾಗಿದೆ ಎಂದ ಅವರು, ಬಸವಾದಿ ಶರಣರ ವಿಚಾರಗಳು ಎಲ್ಲರಿಗೂ ಗೊತ್ತಿರಬೇಕು ಅವರ ಬದುಕಿನ ಬಗ್ಗೆ ಎಲ್ಲರಿಗೂ ಗೊತ್ತಿರಬೇಕು ಎಂದು ಹೇಳಿದರು.

See also  ಬೀದರ್: ಇದು ರೈತರ, ಬಡವರ, ಶ್ರಮಿಕರ ಪರವಾದ ಬಜೆಟ್ ಅಲ್ಲ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು