News Kannada
Wednesday, March 29 2023

ಬೀದರ್

ಹುಮನಾಬಾದ್ : ಇದು ನನ್ನ ಕೊನೆಯ ಚುನಾವಣೆ -ಸಿದ್ದರಾಮಯ್ಯ

Humanabad: This will be my last election: Siddaramaiah
Photo Credit : News Kannada

ಹುಮನಾಬಾದ್:‌ ಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆ.‌ ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.‌ ಬರುವ ಚುನಾವಣೆಯಲ್ಲಿ ರಾಜಶೇಖರ ಪಾಟೀಲ ಅವರು 50 ಸಾವಿರ ಮತಗಳಿಂದ ಗೆಲ್ಲಲಿದ್ದಾರೆ ಎಂದರು.

ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ‘ಸಿದ್ದರಾಮಯ್ಯ ಅವರು ಹಿಂದುಳಿದ, ಬಡವರ ಪರವಾಗಿ ಇದ್ದಾರೆ. ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ.

ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಇಡೀ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ಮತಗಳಿಂದ ಹುಮನಾಬಾದ್ ವಿಧಾನ ಸಭಾ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಸರ್ಕಾರ ಚುನಾವಣೆ ಮುನ್ನ ಬಿಎಸ್‌ಎಸ್‌ಕೆ ಕಾರ್ಖಾನೆ ಪುನಶ್ಚೇತನ ಮಾಡುತ್ತೇವೆ ಎಂದಿದ್ದರು.

ಆದರೆ ಕಾರ್ಖಾನೆ ಪ್ರಾರಂಭ ಮಾಡಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕಾರ್ಖಾನೆ ಪುನ ಪ್ರಾರಂಭ ಮಾಡಬೇಕೆಂದು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.

ಶಾಸಕ ಎಂ.ಬಿ.ಪಾಟೀಲ ಮಾತನಾಡಿ, ದೇಶದ ಸರ್ವತೋಮುಖಿ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಎಸಿ,‌ಎಸ್ ಟಿ, ಮೈನಾರಿಟಿ ಸಮುದಾಯಗಳ ಅಭಿವೃದ್ಧಿಗೆ ಒತ್ತು ನೀಡಿದ್ದರು ಎಂದರು.

ಶಾಸಕ ಜಮೀರ್ ಅಹ್ಮದ್ ಖಾನ್ ಮಾತನಾಡಿದರು. ಶಾಸಕ ಈಶ್ವರ ಖಂಡ್ರೆ, ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಅರವಿಂದ್ ಅರಳಿ, ಮಾಜಿ ಶಾಸಕ ಅಶೋಕ್ ಖೇಣಿ, ಬಸವರಾಜ ಪಾಟೀಲ ರಾಯಗಡ್ಡ, ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಧನರಾಜ್ ತಾಳಂಪಳ್ಳಿ, ಗೀತಾ ಚಿದ್ರಿ, ಮೀನಾಕ್ಷಿ ಸಂಗ್ರಾಮ, ಬಸವರಾಜ ಜಾಬಶೆಟ್ಟಿ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ವೀರಣ್ಣ ಪಾಟೀಲ, ಪ್ರಕಾಶ್ ಪಾಟೀಲ, ದತ್ತು ಕುಮಾರ್ ಚಿದ್ರಿ ಇದ್ದರು.

 

See also  ಬೀದರ್: ಮದರಸಾದಲ್ಲಿ ಪೂಜೆ ಸಲ್ಲಿಸಿದ ಹಿಂದೂ ಕಾರ್ಯಕರ್ತರು, ಕಟ್ಟೆಚ್ಚರ ವಹಿಸಿದ ಪೊಲೀಸರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು