News Kannada
Thursday, March 30 2023

ಬೀದರ್

ಬೀದರ್: ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಅಗತ್ಯವೆಂದ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್

There should be political consciousness among children, says MLA Bandeppa Khashempur
Photo Credit : News Kannada

ಬೀದರ್:  ದೇಶದ ರಾಜಕೀಯ ಸ್ಥಿತಿ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಕುರಿತು ಮಕ್ಕಳಿಗೆ ಅರಿವು ಅಗತ್ಯ. ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದು   ಎಲ್ಲರ ಕರ್ತವ್ಯ ಎಂದು  ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗುನ್ನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೆಕೆಆರ್ಡಿಬಿಯ 2022-23ನೇ ಸಾಲಿನ ಮೈಕ್ರೋ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಡಿಟೋರಿಯಂ ಹಾಲ್ ಗೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಬಸವಣ್ಣನವರ ಕಾಲದಲ್ಲಿ ಸಾಮಾಜಿಕ ಕ್ರಾಂತಿ ನಡೆಯಿತು. ಪ್ರಸ್ತುತ ಶಿಕ್ಷಣದಲ್ಲಿ ಕ್ರಾಂತಿಯಾಗಬೇಕಿದೆ.  ಪ್ರತಿಯೊಬ್ಬ ತಂದೆ ತಾಯಿಗಳು ತಮ್ಮ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಿಸಬೇಕಾಗಿದೆ. ಕಲ್ಲೊಂದನ್ನು ಶಿಲ್ಪಿಯೂ ಶಿಲೆಯನ್ನಾಗಿ ಮಾಡಿದಂತೆ ಶಿಕ್ಷಕರು ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುತ್ತಾರೆ. ಮಕ್ಕಳು ವಜ್ರವಿದ್ದಂತೆ, ಶಿಕ್ಷಕರು ವಜ್ರವನ್ನು ಶೋಧಿಸಿ ತೆಗೆಯುವ ಕೆಲಸ ಮಾಡುತ್ತಾರೆ.

ಅತ್ಯುತ್ತಮ ಸಾಧನೆ ಮಾಡಿದ ಬಹುತೇಕ ಸಾಧಕರು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲೇ ಕಲಿತವರಾಗಿದ್ದಾರೆ. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ. ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ ನಿವಾರಿಸುವ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕಾಗಿದೆ. ಗುನ್ನಳ್ಳಿ ಶಾಲೆಯಲ್ಲಿನ ನೀರಿನ ಕೊರತೆ ನಿವಾರಿಸುವ ಮತ್ತು ಶೌಚಾಲಯ ನಿರ್ಮಿಸಿ ಕೊಡುವ ಕೆಲಸವನ್ನು ಶೀಘ್ರದಲ್ಲೇ ಮಾಡಿಸಿಕೊಡುತ್ತೇನೆ.

ಗುನ್ನಳ್ಳಿ ಗ್ರಾಮ ಸಂಚಾರ ನಡೆಸಿ ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದೇನೆ. ಅವುಗಳನ್ನು ಹಂತಹಂತವಾಗಿ ಪರಿಹರಿಸುವಂತೆ ಸಂಬಂಧಿಸಿದವರಿಗೆ ತಿಳಿಸಿದ್ದೇನೆ. ನಾವೆಲ್ಲರೂ ಸೇರಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಬೇಕಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡೋಣ ಎಂದು ಶಾಸಕರು ತಿಳಿಸಿದರು.

ಪ್ರಮುಖರಾದ ವೀರೇಂದ್ರ ಮಾಲಿಪಾಟೀಲ್, ಪವನ್ ಪೊಲೀಸ್ ಪಾಟೀಲ್, ಬಸವರಾಜ ಬಿರಾದಾರ್, ರಮೇಶ್ ಬಿರಾದಾರ, ಸರಸ್ವತಿ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲೆಯ ಶಿಕ್ಷಕರು, ಸಿಬ್ಬಂದಿ, ಮಕ್ಕಳು, ಗ್ರಾಮಸ್ಥರು ಇದ್ದರು.

See also  ಎಸ್.ಡಿ.ಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಲ್ಲಿ ಎನ್.ಇ.ಪಿ ಕಾರ್ಯಾಗಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು