News Kannada
Friday, March 24 2023

ಬೀದರ್

ಬೀದರ್: ಸದನದಲ್ಲಿ ಸಿದ್ದೇಶ್ವರ ಶ್ರೀಗಳನ್ನು ಸ್ಮರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

Mla Bandeppa Khashempur, who has been accused of a double-engine government
Photo Credit : News Kannada

ಬೀದರ್:  ಬಜೆಟ್ಇ‌ ಅಧಿವೇಶನದ ಮೊದಲ ದಿನ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಂಡಿಸಿ ಸಂತಾಪ ಸೂಚಕ ನಿರ್ಣಯದ ವೇಳೆ

ಇತ್ತೀಚೆಗೆ ಲಿಂಗೈಕ್ಯರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ  ಕುರಿತು ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್‌ ಮಾತನಾಡಿದರು.   2006 ಸಂದರ್ಭದಲ್ಲಿ ತಾವು ಮೊದಲನೇ ಬಾರಿಗೆ ಸಚಿವರಾಗಿದ್ದಾಗ ಬೀದರ್ ನಲ್ಲಿ ಸಿದ್ದೇಶ್ವರ ಶ್ರೀಗಳು ನೀಡಿದ್ದ ಪ್ರವಚನದ ಮೆಲುಕು ಹಾಕಿದರು. ಸಿದ್ದೇಶ್ವರ ಶ್ರೀಗಳ ಬಗ್ಗೆ ನಾವು ಎಷ್ಟು ಹೇಳಿದರು ಕಡಿಮೆ. ಇಂತಹ ಯುಗದಲ್ಲಿ ಸರಳತೆ ಹಾಗೂ ಸಮಯ ಪಾಲನೆಗೆ ಶ್ರೀಗಳು ಮಹತ್ವ ನೀಡಿದ್ದರು. 2006ರಲ್ಲಿ ನಾನು ಪ್ರಥಮ ಬಾರಿಗೆ ಮಂತ್ರಿಯಾಗಿದ್ದಾಗ ಬೀದರ್ ನಲ್ಲಿ ಶ್ರೀಗಳ ಒಂದು ತಿಂಗಳು ಪ್ರವಚನ ನಡೆದಿತ್ತು. ನಗರದ ಬಿವಿಬಿ ಕಾಲೇಜ್ ಆವರಣದಲ್ಲಿ ಪ್ರತಿದಿನ ಬೆಳಗ್ಗೆ ಆರು ಗಂಟೆಗೆ ಪ್ರವಚನ ಆರಂಭವಾಗುತ್ತಿತ್ತು. ಶ್ರೀಗಳು ಒಂದೇ ಒಂದು ನಿಮಿಷ ಹೆಚ್ಚ ಕಡಿಮೆಯಾಗದಂತೆ ಸರಿಯಾದ ಸಮಯಕ್ಕೆ ಪ್ರವಚನ ಆರಂಭಿಸುತ್ತಿದ್ದರು. ಶ್ರೀಗಳ ಪ್ರವಚನ ಕೇಳಲು ಪ್ರತಿನಿತ್ಯ 10 ರಿಂದ 15 ಸಾವಿರ ಜನ ಸೇರುತ್ತಿದ್ದರು ಎಂದು ಹಳೆಯ ದಿನಗಳನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮೆಲುಕು ಹಾಕಿದರು.

ಶ್ರೀಗಳ ಪ್ರವಚನ, ಉಪನ್ಯಾಸಗಳಲ್ಲಿನ ಪ್ರತಿಶತ ಒಂದರಷ್ಟು ಭಾಗವನ್ನಾದರು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕಾಗಿದೆ ಎಂದು ನಾನು ಕೂಡ ಅನೇಕ ಕಡೆಗಳಲ್ಲಿ ಹೇಳುತ್ತೇನೆ. ಶ್ರೀಗಳು ಸರಳ ಜೀವಿಯಾಗಿದ್ದರು. ಜೇಬು ಇಲ್ಲದ ಅಂಗಿ ತೊಡುತ್ತಿದ್ದ ಶ್ರೀಗಳು ಮೊಬೈಲ್ ಕೂಡ ಬಳಸುತ್ತಿರಲಿಲ್ಲ. ಭಾರತ ಮಾತ್ರವಲ್ಲ ವಿಶ್ವವೇ ಇಂತಹ ವ್ಯಕ್ತಿತ್ವದ ಬಗ್ಗೆ ತಿಳಿದುಕೊಳ್ಳಬೇಕಿದೆ. ನಾವೆಲ್ಲರೂ ನಮ್ಮ ಬದುಕಿನಲ್ಲಿ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸಾಗಬೇಕಾಗಿದೆ. ಶ್ರೀಗಳು ನಮ್ಮನ್ನು ಅಗಲಿಲ್ಲ. ಅವರಿಗೆ ಸಂತಾಪ ಸೂಚಿಸುವುದು ಬೇಡ. ಅವರು ನಮ್ಮೊಟ್ಟಿಗೆ ಇದ್ದಾರೆ. ಅವರ ಪ್ರವಚನ, ತತ್ವಾದರ್ಶಗಳು, ವಿಚಾರಗಳು, ಮಾರ್ಗದರ್ಶನ ಸದಾಕಾಲವೂ ನಮ್ಮ ಜನರೊಟ್ಟಿಗೆ ಇರುತ್ತದೆ. ನಮ್ಮನ್ನು ಸರಿದಾರಿಗೆ ಕರೆದುಕೊಂಡು ಹೋಗುತ್ತದೆ. ಕರುನಾಡಿನಲ್ಲಿ ಜನಿಸಿದ ಅವರು ಅಜರಾಮರವಾಗಿರುತ್ತಾರೆ ಎಂಬ ಭಾವನೆ ನಮಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್‌ ಹೇಳಿದರು.

See also  ಬಂಟ್ವಾಳ: ಪುಂಜಾಲಕಟ್ಟೆ ಎಸ್. ಐ.ಸುತೇಶ್ ವರ್ಗಾವಣೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು