News Kannada
Tuesday, March 21 2023

ಬೀದರ್

ಬೀದರ್: ಅನ್ಯ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಯುವಕರು

Bidar: Youths who quit other parties to join BJP
Photo Credit : News Kannada

ಬೀದರ್: ದಕ್ಷಿಣ ಕ್ಷೇತ್ರದ ಶೇಖಪೂರ‌ ಗ್ರಾಮದ ಯುವಕರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಾ.ಶೈಲೇಂದ್ರ ಬೆಲ್ದಾಳೆ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಪಕ್ಷದ ಧ್ವಜ ನೀಡಿ ಬರಮಾಡಿಕೊಂಡು ಡಾ.ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ ಬಿಜೆಪಿ ಪಕ್ಷದ ಅಧಿಕಾರದಲ್ಲಿ ರಾಜ್ಯಾದ್ಯಂತ ಆಗುತ್ತಿರುವ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಷಯ. ಕಾರ್ಯ ಕರ್ತರು ನಿಷ್ಠೆಯಿಂದ ಕೆಲಸ ಮಾಡಿದರೆ ಮುಂದೆ ನನ್ನ ಅಧಿಕಾರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು.

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಜನರಿಗೆ ಯಾವುದೇ ಕೆಲಸಗಳು ಆಗುವುದಿಲ್ಲ. ಸುಳ್ಳು ಹೇಳಿ ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುವುದೇ ಕಾಂಗ್ರೆಸ್ ಪಕ್ಷದ ಕೆಲಸವಾಗಿದೆ. ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಪಕ್ಷದವರು ಸಹಿಸಿಕೊಳ್ಳುತ್ತಿಲ್ಲ. ಮತ್ತೆ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಅವರಿಗೆ ಭಯಶುರುವಾಗಿದೆ ಎಂದರು.

ಈ ಸಂದರ್ಭದಲ್ಲಿ 30 ಕ್ಕಿಂತ ಹೆಚ್ಚಿನ ಯುವಕರು ಪಕ್ಷ ಸೇರ್ಪಡೆಗೊಂಡರು, ಬಕ್ಕಪ್ಪಾ, ಭೀಮಣ್ಣ, ದಯಾನಂದ ಪರಮೇಶ, ಸಂಗಯ್ಯ ಸ್ವಾಮಿ, ಶಿವು ಹಡಪದ, ರೇವಣ್ಣಾ ಸಿದ್ದಾ, ಶಿವು ಸ್ವಾಮಿ, ವಿಶಾಲ ಗೊಂಡ, ವಿರೇಶ ಕೋಳಿ, ನಾಗೇಶ ರಾಜಗೊಂಡ, ಸತೀಶ ಮಡಿವಾಳ, ಅಮರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

See also  ಬೀದರ್: ರಾಜ್ಯ ಮಟ್ಟದ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು