News Kannada
Thursday, March 23 2023

ಬೀದರ್

ಬೀದರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಗದಲ್ ಯುವಕರು

Bagadal youths quit BJP to join Congress
Photo Credit : News Kannada

ಬೀದರ: ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ ಖೇಣಿ ರವರ ಅಭಿವೃದ್ಧಿ ಕಾರ್ಯಮೆಚ್ಚಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಗದಲ್ ಗ್ರಾಮದ ಸುಮಾರು 30 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಅವರಿಗೆ ಮಾನ್ಯ ಅಶೋಕ ಖೇಣಿ ಹಾಗು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾದ ಚಂದ್ರಶೇಖರ್ ಚನಶಟ್ಟಿ, ಕರೀಮ ಸಾಬ ಕಮಠಾಣ ರವರು ಪಕ್ಷದ ಶಾಲು ಹೊದಿಸಿ ಬಾವುಟ ಕೊಟ್ಟು ಬರಮಾಡಿಕೊಂಡರು.

ಸೇರ್ಪಡೆಯಾದ ಬಳಿಕ ಮಾತನಾಡಿದ ಕಾರ್ತಿಕ ದೇಸಾಯಿ ರವರು ನಾನು ಸುಮಾರು 8 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಯುವ ಮೊರ್ಚ ಕಾರ್ಯದರ್ಶಿಯಾಗಿ ಕೆಲಸ ಮಾಡುವತ್ತೀದ್ದೆ ಅಲ್ಲಿ ಯಾವುದೇ ಕಾರ್ಯಕರ್ತರಿಗೆ ಸ್ಪಂದನೆ ಸಿಗುತ್ತಿಲ್ಲ ಆದರಿಂದ ಮಾನ್ಯ ಅಶೋಕ ಖೇಣಿ ರವರು ನಮ್ಮ ಗ್ರಾಮದಲ್ಲಿ ಸುಮಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಎನಾದರೂ ಅಭಿವೃದ್ಧಿ ಆಗಬೇಕಾದರೆ ಅದು ಮಾನ್ಯ ಅಶೋಕ ಖೇಣಿ ಅವರಿಂದ ಸಾಧ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾನ್ಯ ಅಶೋಕ ಖೇಣಿ ರವರಿಗೆ ಮತ ಕೊಟ್ಟು ವಿಧಾನಸಭೆ ಆಯ್ಕೆ ಮಾಡಿ ಅಭಿವೃದ್ಧಿ ನೋಡಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಿಸಾನ್ ಸೇಲ್ ಅಧ್ಯಕ್ಷರಾದ ಸಂತೋಷ ಪಾಟೀಲ, ಕಿಸಾನ್ ಸೇಲ್ ರಾಜ್ಯ ಕಾರ್ಯದರ್ಶಿಯಾದ ಉದಯಕುಮಾರ್ ಚಟನಳ್ಳಿ, ಮುಖಂಡರಾದ ಆನಂದ ಕಾರಕಂಪಳ್ಳಿ, ವೈಜಿನಾಥ ಸೇರೀ ಅನೇಕರೂ ಹಾಜರಿದ್ದರು.

See also  ಬೀದರ್: ತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು