News Kannada
Sunday, June 04 2023
ಬೀದರ್

ಔರಾದ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿದ ಸುಧಾಕರ್ ಕೊಳ್ಳುರ್

Sudhakar Kollur distributes Congress guarantee card
Photo Credit : News Kannada

ಔರಾದ: ತಾಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಯಿತು.

ಸಂದರ್ಭದಲ್ಲಿ ಸುಧಾಕರ ಕೊಳ್ಳುರ ಮಾತನಾಡಿ, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡಲು ಈಗಾಗಲೇ ನಮ್ಮ ನಾಯಕರು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್.
ಪ್ರತಿ ಕುಟುಂಬದ ಯಜಮಾನಿಗೆ ₹2000 ಅಗತ್ಯ ವಸ್ತುಗಳ ಖರೀದಿಗೆ ಅನಕೂಲವಾಗಲಿದೆ.

ಹಸಿವು ಮುಕ್ತ ರಾಜ್ಯಕ್ಕಾಗಿ 10kg ಅಕ್ಕಿ ನೀಡಲಾಗುವುದು, ಪ್ರತಿ ತಿಂಗಳು ಪದವೀಧರರಿಗೆ 3000ರೂ ಹಾಗೂ ಡಿಪ್ಲೊಮಾ ಪದವೀಧರರಿಗೆ 1500 ರೂ. ಭತ್ಯೆ ನೀಡಲು ಪ್ರಮಾಳಿಕೆ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.

ಗ್ರಾಮದ ಮನೆ ಮನೆಗೆ ತೆರಳಿ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಕಾಂಗ್ರೆಸ್ ಮುಖಂಡರಾದ ನರ್ಸಿಂಗ್ ಪಾಟೀಲ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಂಕು ನಿಸ್ಪತೆ, ಹರಿದೇವ ಸಂಗನಾಳ, ರಾಜು, ಶಿವಾಜಿ ಉಪಸ್ಥಿತರಿದ್ದರು.

See also  ಔರಾದನ ಮಹಿಳೆಗೆ ಸ್ವಚ್ಛ ಸುಜಲ್ ಶಕ್ತಿ ಪ್ರಶಸ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು