News Kannada
Sunday, September 24 2023
ಬೀದರ್

ಬೀದರ್: ಜನ ಸೇವೆ ಮಾಡಲು ಅವಕಾಶ ಕೊಡಿ- ಬಿಜೆಪಿ ಅಭ್ಯರ್ಥಿ ಈಶ್ವರ ಸಿಂಗ್

Give me an opportunity to serve the people: BJP candidate Ishwar Singh
Photo Credit : News Kannada

ಬೀದರ್‌: ‘ಸಾಮಾನ್ಯ ಕಾರ್ಯಕರ್ತನಾಗಿ 35 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಬಿಜೆಪಿ ನನ್ನ ಸೇವೆಯನ್ನು ಗುರುತಿಸಿ ಟಿಕೆಟ್ ಘೋಷಿಸಿದೆ. ಜನ ಸೇವೆ ಮಾಡಲು ಒಂದು ಬಾರಿ ಅವಕಾಶ ಕಲ್ಪಿಸಬೇಕು’ ಎಂದು ಬೀದರ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಈಶ್ವರಸಿಂಗ್‌ ಠಾಕೂರ್‌ ಮತದಾರರಲ್ಲಿ ಮನವಿ ಮಾಡಿದರು.

‘ಬಜರಂಗ ದಳದಲ್ಲಿ ಹಲವು ವರ್ಷ ಕಾರ್ಯನಿರ್ವಹಿಸಿದ್ದೇನೆ. ಪಕ್ಷ ವಹಿಸಿದ ಅನೇಕ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಈ ಜನ ಸೇವೆ ಮಾಡಲು ಉತ್ಸುಕನಾಗಿದ್ದೇನೆ’ ಎಂದು ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ನಾನು ರಾಜಕೀಯ ಹಿನ್ನೆಲೆಯಿಂದ ಬಂದಿಲ್ಲ. ಸಾಮಾನ್ಯ ಶಿಕ್ಷಕ ಕುಟುಂಬದಿಂದ ಸಮಾಜ ಸೇವೆ ಮಾಡಲು ರಾಜಕೀಯಕ್ಕೆ ಬಂದಿರುವೆ. ನನಗೆ ಟಿಕೆಟ್‌ ನೀಡಿದ ಸಂಸದೀಯ ಮಂಡಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯ ಘಟಕದ ಅಧ್ಯಕ್ಷರಿಗೆ ಋಣಿಯಾಗಿದ್ದೇನೆ. ಬೀದರ್‌ ಜನತೆಗೆ ದಿನದ 24 ಗಂಟೆಯೂ ಸೇವೆ ಒದಗಿಸಲು ಸಿದ್ಧನಿದ್ದೇನೆ ಎಂದು ಹೇಳಿದರು.

ಶಶಿಧರ ಹೊಸಳ್ಳಿ ಮಾತನಾಡಿ, ‘ಈಶ್ವರಸಿಂಗ್‌ ಅವರು ಬಜರಂಗ ದಳದಲ್ಲಿ ಕೆಲಸ ಮಾಡಿದ್ದಾರೆ. ಹಿಂದೂಗಳಿಗೆ ಸೇವೆ ನೀಡಲು ಚುನಾವಣೆಗೆ ಸ್ಪರ್ಧಿಸಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಓಲ್ಡ್‌ಸಿಟಿಯಲ್ಲಿ ಮಹಮೂಬದ್‌ ಗವಾನ ಸ್ಮಾರಕದ ಬಳಿ ಪೂಜೆ ಸಲ್ಲಿಸಿಲು ಹೋದ ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲು ಬೀದರ್‌ ಶಾಸಕ ಪೊಲೀಸರ ಮೇಲೆ ಒತ್ತಡ ಹಾಕಿದ್ದರು. ಅಂತಹ ಘಟನೆಗಳು ಮರಕಳಿಸದಂತೆ ನೋಡಿಕೊಳ್ಳಲು ಈಶ್ವರ ಸಿಂಗ್ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸೋಮನಾಥ ಪಾಟೀಲ, ಚಂದ್ರಶೇಖರ ಗಾದಾ ಇದ್ದರು.

See also  ಶಿಕ್ಷಣ ಕ್ಷೇತ್ರದ ಕ್ರಾಂತಿ ಅತ್ಯಗತ್ಯ: ಶಾಸಕ ಬಂಡೆಪ್ಪ ಖಾಶೆಂಪುರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು