News Kannada
Wednesday, May 31 2023
ಬೀದರ್

ಔರಾದ್‌: ನಾಳೆ ಕಾಂಗ್ರೆಸ್‌ ಅಭ್ಯರ್ಥಿ ಡಾ.ಶಿಂಧೆ ನಾಮಪತ್ರ ಸಲ್ಲಿಕೆ

Aurad: Congress candidate Dr Shinde to file his nomination papers tomorrow
Photo Credit : News Kannada

ಔರಾದ್‌: ಔರಾದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಭೀಮಸೇನ್‌ರಾವ ಶಿಂಧೆ ಅವರು ಏ. 19 ರಂದು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ನಂತರ ಬೆಳಗ್ಗೆ 10.30 ಗಂಟೆಗೆ ಎಪಿಎಂಸಿ ಬಳಿಯ ಕನ್ನಡಾಂಬೆ ವೃತ್ತದಿಂದ ಮಿನಿ ವಿಧಾನ ಸೌಧವರೆಗೆ ಮುಖ್ಯ ರಸ್ತೆಯಲ್ಲಿ ಬೃಹತ್‌ ಮೆರವಣಿಗೆ ಮೂಲಕ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಯಲಿದೆ.

ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ರಹಿಂಖಾನ್, ಎಂಎಲ್ಸಿಗಳಾದ ಚಂದ್ರಶೇಖರ್ ಪಾಟೀಲ್, ಭೀಮರಾವ ಪಾಟೀಲ್, ಅರವಿಂದ ಅರಳಿ, ಮಾಜಿ ಎಂಎಲ್ಸಿ ವಿಜಯಸಿಂಗ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕಾಂಗ್ರೆಸ್‌ ಉಸ್ತುವಾರಿ ಶರಣು ಮೋದಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಗ್ರಾಮೀಣ ಘಟಕ ಅಧ್ಯಕ್ಷ ಆನಂದ ಚವ್ಹಾಣ ಸೇರಿ ಜಿಲ್ಲೆಯ ಹಲವು ನಾಯಕರು, ಮುಖಂಡರು ಭಾಗಿಯಾಗಲಿದ್ದಾರೆ. ಕ್ಷೇತ್ರದ ಕಾರ್ಯಕರ್ತರು, ಮುಖಂಡರು, ಸ್ವಾಭಿಮಾನಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಭೀಮಸೇನ್‌ ರಾವ ಶಿಂಧೆ ಮನವಿ ಮಾಡಿಕೊಂಡಿದ್ದಾರೆ.

See also  ಬೀದರ್‌: ಅಬಕಾರಿ ದಾಳಿ, 1.44 ಲಕ್ಷ ಮೌಲ್ಯದ ಮದ್ಯ ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು