News Kannada
ಬೀದರ್

ಬೀದರ್: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಹೀಂಖಾನ್ ನಾಮಪತ್ರ ಸಲ್ಲಿಕೆ

Bidar: Congress candidate for assembly constituency Raheen Khan submits nomination papers
Photo Credit : News Kannada

ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಹೀಂಖಾನ್ ನಗರದಲ್ಲಿ ಬುಧವಾರ ಶಕ್ತಿ ಪ್ರದರ್ಶನ ಮಾಡಿದರು.

ಸಾವಿರಾರು ಕಾಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಉಮೇದುವಾರಿಕೆ ಸಲ್ಲಿಸಿದರು.

ಚೌಬಾರಾದಿಂದ ಗಾವಾನ್ ಚೌಕ್, ಮುಖ್ಯ ರಸ್ತೆ, ಶಹಾಗಂಜ್ ಕಮಾನ್, ಕ್ರಾಂತಿ ಗಣೇಶ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಮೆರವಣಿಗೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಅಭ್ಯರ್ಥಿ ರಹೀಂಖಾನ್, ಮುಖಂಡ ಅಬ್ದುಲ್ ಮನ್ನಾನ್ ಸೇಠ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬಿಡಿಎ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಮೊದಲಾದವರು ಅಲಂಕೃತ ವಾಹನದಲ್ಲಿ ಇದ್ದರು. ಕೈಬೀಸಿ ಬೆಂಬಲಿಗರಲ್ಲಿ ಜೋಶ್ ತುಂಬಿದರು.

ಬಾಜಾ ಭಜಂತ್ರಿ ಮೆರವಣಿಗೆಗೆ ಕಳೆ ತಂದುಕೊಟ್ಟವು. ಮೆರವಣಿಗೆ ಉದ್ದಕ್ಕೂ ಪಟಾಕಿಗಳ ಸುರಿಮಳೆಯೇ ಆಯಿತು. ಮಾರ್ಗ ಮಧ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳು ಶಾಸಕ ರಹೀಂಖಾನ್ ಅವರಿಗೆ ಮಾಲಾರ್ಪಣೆ ಮಾಡಿ, ಸ್ವಾಗತಿಸಿ ಬರಮಾಡಿಕೊಂಡರು. ರಹೀಂಖಾನ್ ಅವರಿಗೆ ಜಯವಾಗಲಿ ಎನ್ನುವ ಘೋಷಣೆಗಳನ್ನು ಮೊಳಗಿಸಿದರು. ಕಾರ್ಯಕರ್ತರು ಪ್ರಖರ ಬಿಸಿಲನ್ನೂ ಲೆಕ್ಕಿಸದೆ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಅಲ್ಪಸಂಖ್ಯಾತರ ವಿರೋಧಿ ನೀತಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಅಲ್ಪಸಂಖ್ಯಾತರ ವಿರೋಧಿ ನೀತಿ ಅನುಸರಿಸುತ್ತಿವೆ ಮೀಸಲಾತಿ ರದ್ದುಪಡಿಸಿವೆ ಎಂದು ಶಾಸಕ ರಹೀಂಖಾನ್ ಆರೋಪಿಸಿದರು.

ಈಗಿನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ 15 ವರ್ಷ ಬಿಜೆಪಿಯಲ್ಲಿದ್ದರು. ಬಿಜೆಪಿ ಸರ್ಕಾರದ ನೀತಿಗಳನ್ನು ಬೆಂಬಲಿಸಿದ್ದರು. ಅಭಿನಂದನೆ ಸಲ್ಲಿಸಿದ್ದರು. ಕಾರಣ, ಅಲ್ಪಸಂಖ್ಯಾತರು ಎಚ್ಚರಿಕೆ ವಹಿಸಬೇಕು. ಮತಗಳ ವಿಭಜನೆ ಆಗದಂತೆ ನೋಡಿಕೊಳ್ಳಬೇಕು ಎಂದು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದರು.

ಮೂರು ಅವಧಿಗೆ ಶಾಸಕನಾಗಿ ಬೀದರ್ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕ್ಷೇತ್ರವನ್ನು ಮಾದರಿ ಮಾಡಲು ಮತದಾರರು ಮತ್ತೊಮ್ಮೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಮತದಾರರು ಎರಡೂ ಪಕ್ಷಗಳಿಗೆ ಚುನಾವಣೆಯಲ್ಲಿ ಅವಕಾಶ ಕೊಡಬಾರದು ಎಂದು ಹೇಳಿದರು.

ರಹೀಂಖಾನ್ ಅವರ ನಾಮಪತ್ರ ಸಲ್ಲಿಕೆಗೆ ಸರ್ವ ಸಮುದಾಯಗಳ ಜನ ಅಪಾರ ಸಂಖ್ಯೆಯಲ್ಲಿ ಬಂದಿರುವುದನ್ನು ಗಮನಿಸಿದರೆ ಅವರು ಭಾರಿ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ ಎಂದರು.

See also  ಬೀದರ್: ವಿಶ್ವ ಕನ್ನಡಿಗರ ಸಂಸ್ಥೆಯ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು