News Kannada
Thursday, June 01 2023
ಬೀದರ್

ಔರಾದ್‌ನಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Over 100 workers join BJP in Aurad
Photo Credit : News Kannada

ಔರಾದ್‌: ಸಚಿವರಾದ ಪ್ರಭು.ಬಿ ಚವ್ಹಾಣ ಅವರ ಸಮ್ಮುಖದಲ್ಲಿ ಔರಾದ(ಬಿ) ಪಟ್ಟಣದಲ್ಲಿ ವಿವಿಧ ಪಕ್ಷಗಳ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಹೊಸದಾಗಿ ಸೇರ್ಪಡೆಯಾದ ಪ್ರಮುಖರನ್ನು ಸಚಿವರು ಬಿಜೆಪಿ ಪಕ್ಷದ ಶಾಲು ಹೊದಿಸಿ, ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಹೆಳವ ಸಮಾಜದ ಪ್ರಮುಖರಾದ ನಾಗನಾಥ, ಅಶೋಕ, ಈಶ್ವರ, ಸುನೀಲ್, ಅಶೋಕ, ಚಿನ್ನಪ್ಪ, ಅಣ್ಣೆಪ್ಪ, ರಾಜಕುಮಾರ ಸೇರಿದಂತೆ ಅನೇಕರು ಬಿಜೆಪಿಗೆ ಸೇರ್ಪಡೆಯಾದರು.

ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಪ್ರಭು.ಬಿ ಚವ್ಹಾಣ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಸಚಿವರ ಅಭಿವೃದ್ಧಿ ಕೆಲಸಗಳಿಂದ ಪ್ರಭಾವಿತರಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇವೆ. ಪ್ರಭು ಚವ್ಹಾಣ ಅವರಿಂದ ಮಾತ್ರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಹಾಗಾಗಿ ಪ್ರಸಕ್ತ ಚುನಾವಣೆಯಲ್ಲಿ ಸಚಿವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುತ್ತೇವೆ ಎಂದು ಭರವಸೆ ನೀಡಿದರು.

ಈ ವೇಳೆ ಸಚಿವರು ಮಾತನಾಡಿ, ಭಾರತೀಯ ಜನತಾ ಪಕ್ಷದವು ಕಾರ್ಯಕರ್ತರ ಪಕ್ಷವಾಗಿದೆ. ಅತ್ಯಂತ ಶಿಸ್ತಿನ ಪಕ್ಷ, ಇಲ್ಲಿ ಕಾರ್ಯಕರ್ತರಿಗೆ ಪ್ರಮುಖ ಸ್ಥಾನಮಾನವಿರುತ್ತದೆ. ಔರಾದ(ಬಿ) ಕ್ಷೇತ್ರದಲ್ಲಿ ಕಾರ್ಯಕರ್ತರು ಸಾಕಷ್ಟು ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಉತ್ಸಾಹವೇ ನನಗೆ ಶಕ್ತಿಯಾಗಿ ಕೆಲಸ ಮಾಡುತ್ತಿದೆ. ತಮ್ಮ ಶಕ್ತಿಯನ್ನು ಚುನಾವಣೆಯಲ್ಲಿ ತೋರಿಬೇಕಿದೆ ಎಂದು ಹೇಳಿದರು.

See also  ಹುಣಸೂರು: ಬಟ್ಟೆ ಒಗೆಯುವ ವೇಳೆ ನೀರಿಗೆ ಬಿದ್ದು ಮಹಿಳೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು