News Kannada
Friday, September 22 2023
ಬೀದರ್

ಪ್ರಭು ಚೌಹಾಣ್ ಮುಕ್ತ ಔರಾದ: ಜೈಸಿಂಗ್ ರಾಠೋಡ್ ಹೇಳಿಕೆ

OURAD ELECTION
Photo Credit : News Kannada

ಔರಾದ: ತಾಲೂಕಿನ ಜನತೆಗೆ ಕಳೆದ 15 ವರ್ಷಗಳಿಂದ ಪ್ರಭು ಚೌಹಾಣ್ ಅವರು ಮೋಸ ಮಾಡುತ್ತಾ ಬಂದಿದ್ದಾರೆ. ಇಲ್ಲಿಯವರೆಗೆ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ತಾಲೂಕಿನ ಜನತೆ ಸೋಲಿಸಿ ಪ್ರಭು ಚೌಹಾಣ್ ಮುಕ್ತ ಔರಾದ ಮಾಡಬೇಕು ಎಂದು ಜೆಡಿಎಸ್ ಅಭ್ಯರ್ಥಿ ಜೈಸಿಂಗ್ ರಾಠೋಡ್ ಹೇಳಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಯುವ ಸಮುದಾಯದವರಿಗೆ ಯಾವುದೇ ಕೆಲಸವಿಲ್ಲದೆ ಹೈರಾಣಗಿದ್ದಾರೆ. ಯಾವುದೇ ಒಂದು ಕಂಪನಿ ತರಲು ಇವರ ಕೈಲಾಗಲಿಲ್ಲ. ಬೇಸಿಗೆ ಬಂದರೆ ಸಾಕು ತಾಲೂಕಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಜನ  ರಸ್ಕಾರ ಮಾಡಿದ್ದಾರೆ. ತಾಲೂಕಿನಲ್ಲಿ ಭೀಮ್ ಸೇನರಾಮ್ ಸಿಂಧೆ ಕೊಡುಗೆ ಏನಿದೆ ಎಂದು ಪ್ರಶ್ನೆ ಮಾಡಿದರು. ನಾನು ಕಳೆದ ಮೂರು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದೇನೆ, ನೀರಿನ ಸಮಸ್ಯೆ ಇದ್ದ ಕಡೆ ಟ್ಯಾಂಕರ್ ವ್ಯವಸ್ಥೆ ಮಾಡಿಸಿದ್ದೇವೆ, ರೈತ ಪರ ಹೋರಾಟಗಳನ್ನು ಮಾಡಿದ್ದೇನೆ ಆದ್ದರಿಂದ ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದೆ. ಚುನಾವಣೆಯಲ್ಲಿ ಸುಮಾರು 20ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೇ ಮೊದಲ ವಾರದಲ್ಲಿ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಜೆಡಿಎಸ್ ನಾಯಕರುಗಳನ್ನು ಕರೆಸಿ ಸುಮಾರು 50000 ಜನರನ್ನು ಸೇರಿಸಿ ಬೃಹತ್ ಮಟ್ಟದ ಬಹಿರಂಗ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ತಾನಾಜಿ ತೋರಣೇಕರ್, ಬಾಲಾ ಸಾಹೇಬ್ ರಾಠೋಡ್, ಕಿಶನ್ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

See also  ಔರಾದ: ಬೆಳಕುಣಿ.ಬಿ ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಭು ಚವ್ಹಾಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು