ಬೀದರ್: ಕೌಟುಂಬಿಕ ಕಲಹ ಹಿನ್ನೆಲೆ ಭಾವನೇ ನಾದಿನಿಯ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತ್ರೀಪುರಾಂತ ಪಟ್ಟಣದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆ ಗೃಹ ರಕ್ಷಕ ದಳದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು ಸಂಗೀತ ಶ್ರೀಧರ್ ಕಾಂಗೆ (35) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.
ಪತ್ನಿಯ ಅಣ್ಣ ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ.
ಗಲಾಟೆಯಲ್ಲಿ ಹರಿತವಾದ ಆಯುಧದಿಂದ ಮಹಿಳೆಗೆ ಇರಿದು ಕೊಲೆ ಮಾಡಿದ್ದಾನೆ, ನಂತರ ಮಹಿಳೆಯ ಹತ್ಯೆಗೈದ ಆರೋಪಿ ಬಸವಕಲ್ಯಾಣ ನಗರಸಭೆಯಲ್ಲಿ ಪೌರ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯ ನೋಡಿ ಆರೋಪಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಂದಿಗೆ ಜಗಳವಾಡಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೋಲಿಸರು ಶೋಧ ಕೈಗೊಂಡಿದ್ದಾರೆ.