News Kannada
Sunday, September 24 2023
ಬೀದರ್

ಬೀದರ್: ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ – ಬಂಡೆಪ್ಪ ಖಾಶೆಂಪುರ್

Let two ministers work for the holistic development of the district - Bandeppa Khashempur
Photo Credit : News Kannada

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ನೇಮಕಗೊಂಡ ಜಿಲ್ಲೆಯ ಶಾಸಕರಾದ ಈಶ್ವರ ಖಂಡ್ರೆ  ಹಾಗೂ ರಹಿಂಖಾನ್ ರವರು ಸೇರಿದಂತೆ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು ಶುಭ ಹಾರೈಸಿದ್ದಾರೆ.

ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ಜಿಲ್ಲೆಯ ಶಾಸಕರಾದ ಈಶ್ವರ ಖಂಡ್ರೆ ಹಾಗೂ ರಹಿಂಖಾನ್ ರವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆ ತಿಳಿಸಿದ ಅವರು, ಈ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ, ಇವರಿಂದ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ, ಕಾರ್ಯಗಳು ಆಗಲಿ ಎಂದು ಶುಭ ಕೋರಿದ್ದಾರೆ.

“ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೀದರ್ ಜಿಲ್ಲೆಯ ಶಾಸಕರಾದ ಸನ್ಮಾನ್ಯ   ಈಶ್ವರ್ ಖಂಡ್ರೆ ಹಾಗೂ ಸನ್ಮಾನ್ಯ ರಹಿಂಖಾನ್ವ ಅರಿಗೆ ಅಭಿನಂದನೆಗಳು. ಈ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ.”

“ಇವರಿಂದ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ, ಕಾರ್ಯಗಳು ಆಗಲಿ. ಈ ಸರ್ಕಾರದಲ್ಲಿ ಬೀದರ್ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಿದ   ಸಿದ್ದರಾಮಯ್ಯ  ನೇತೃತ್ವದ ಸರ್ಕಾರಕ್ಕೆ ಮತ್ತು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಿಲ್ಲೆಯ ಇಬ್ಬರೂ ಶಾಸಕರಿಗೆ ಶುಭವಾಗಲಿ ಎಂದು ಶುಭ ಹಾರೈಸುತ್ತೇನೆ. ಅಭಿನಂದನೆಗಳು.” ಎಂದು ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಫೇಸ್‌ಬುಕ್‌, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆದುಕೊಂಡಿದ್ದಾರೆ.

See also  ಬೆಂಗಳೂರು: 'ಕಾಂಗ್ರೆಸ್ ನಲ್ಲಿ ಎಷ್ಟು ರೌಡಿಶೀಟರ್ ಇದ್ದಾರೆ ಲೆಕ್ಕಹಾಕಲಿ' ತಿರುಗೇಟು ನೀಡಿದ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು