News Kannada
Monday, December 11 2023
ಬೀದರ್

ಶಿಕ್ಷಕಿ ದಲಿತೆಯಾಗಿದ್ದಕ್ಕೆ ಅಂಗನವಾಡಿಗೆ ಮಕ್ಕಳನ್ನು ಕಳುಹಿಸದ ಪಾಲಕರು

Parents don't send children to anganwadi because teacher is Dalit
Photo Credit : News Kannada

ಬೀದರ್: ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ(ಡಬ್ಲ್ಯು) ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ದಲಿತ ಮಹಿಳೆ ಅಂಬಿಕಾ ನೇಮಕಗೊಂಡಿದ್ದರಿಂದ, ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ತಾಲ್ಲೂಕು ಕೇಂದ್ರದಿಂದ 13 ಕಿ.ಮೀ.ದೂರದಲ್ಲಿರುವ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಇಲ್ಲ. ಕಳೆದ ವರ್ಷ ಕಾರ್ಯಕರ್ತೆಯಾಗಿ ನೇಮಕಗೊಂಡಿದ್ದೇನೆ. ಗ್ರಾಮದ ಮನೆ ಮನೆಗೆ ತೆರಳಿ ಮನವಿ ಮಾಡಿದ್ದೇನೆ. ಆದರೂ ಪಾಲಕರು ತಮ್ಮ ಮಕ್ಕಳನ್ನು ಕಳುಹಿಸುತ್ತಿಲ್ಲ. ಸಹಾಯಕಿ ಇಲ್ಲದ ಕಾರಣ ನಾನೇ ಅಡುಗೆ ತಯಾರಿಸುತ್ತಿದ್ದೇನೆ ಎಂದು ಅಂಗನವಾಡಿ ಕಾರ್ಯಕರ್ತೆ ಅಂಬಿಕಾ ಬೇಸರ ವ್ಯಕ್ತಪಡಿಸಿದರು.

ಬ್ಯಾಲಹಳ್ಳಿ(ಡಬ್ಲ್ಯು) ಕೇಂದ್ರಕ್ಕೆ ಹಿಂದೆಯೇ ಭೇಟಿ ನೀಡಿ, ಪಾಲಕರಿಗೆ ತಿಳಿವಳಿಕೆ ನೀಡಲಾಗಿದೆ. ಆದರೂ, ಮಕ್ಕಳನ್ನು ಕಳಿಸದಿರುವುದು ಬೇಸರದ ಸಂಗತಿ. ಎರಡು ದಿನಗಳಲ್ಲಿ ಗ್ರಾ.ಪಂ ಅಧ್ಯಕ್ಷ ಹಾಗೂ ಮುಖಂಡರ ಜತೆ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭಾಲ್ಕಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಬಾಳುವಾಲೆ ‘ ತಿಳಿಸಿದರು.

See also  ಬೀದರ್: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು