News Karnataka Kannada
Friday, April 26 2024
ಬೀದರ್

ಬೀದರ್: ಕಾಂಗ್ರೆಸ್‌ಗೆ ನರೇಂದ್ರ ಮೋದಿ ಭಯ ಆವರಿಸಿದೆ ಸಿಎಂ ಬೊಮ್ಮಾಯಿ ಹೇಳಿಕೆ

Shivamogga riots a result of govt's appeasement politics: Basavaraj Bommai
Photo Credit : News Kannada

ಬೀದರ್:  ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಕಾಂಗ್ರೆಸ್‌ ನವರಿಗೆ ಮೋದಿ ಕಂಡರೆ ಭಯವಿದೆ ಇದರಿಂದಾಗಿಯೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸಹಿತ ಪ್ರತಿಯೊಬ್ಬರು ಅವರ ಮೇಲೆ ವಿಷ ಕಾರುವ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೀದರ್ ಜಿಲ್ಲೆ ಹುಮ್ನಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಪಾಲ್ಗೊಂಡು  ಮಾತನಾಡಿದರು.

ವಿಶ್ವಮಾನವ ಬಸವಣ್ಣ ಅವರ ನಾಡಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಯವರಿಗೆ ಅಭೂತಪೂರ್ವ ಸ್ವಾಗತ ದೊರೆತಿದೆ. ಪ್ರಜಾಪ್ರಭುತ್ವದ ಮೊದಲನೇ ಕರ್ತವ್ಯ ಎಲ್ಲರನ್ನೂ ಸಮಾನವಾಗಿ ನೋಡುವುದು. ಕಾಂಗ್ರೆಸ್ ಇಷ್ಟು ವರ್ಷ ಅದನ್ನು ಮಾಡಿಲ್ಲ. ನಾವು ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇವೆ ಎಂದು ತಿಳಿಸಿದರು.

ಇಡೀ ದೇಶದ ಬಡವರಿಗೆ 10 ಕೆಜಿಅಕ್ಕಿ

ನಮ್ಮ ಪ್ರಧಾನ ಮಂತ್ರಿ ಇಡೀ ದೇಶದ ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದಾರೆ‌. ಕರ್ನಾಟಕದಲ್ಲಿ 13 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದಾರೆ‌. ಜಲ ಜೀವನ್ ಮಿಷನ್ ಅಡಿಯಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಲಕ್ಷ ರೈತರಿಗೆ 16,000 ಕೋಟಿ ನೀಡಿದ್ದೇವೆ‌ ಎಂದು ಹೇಳಿದರು.

ರಾಜ್ಯದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನೀಡಿದ್ದಾರೆ. ಇದರಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. ಬೀದರ್ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು