News Karnataka Kannada
Friday, April 19 2024
Cricket
ಬೀದರ್

ಅಭಿವೃದ್ಧಿ ಕೆಲಸಗಳಿಗೆ ಸಿಕ್ಕ ಗೆಲುವು: ಪ್ರಭು ಚವ್ಹಾಣ

Shivamogga: ‘Financial assistance to be given for private gaushalas’
Photo Credit : News Kannada

ಔರಾದ: ಔರಾದ(ಬಿ) ಕ್ಷೇತ್ರದಿಂದ ಸತತ ನಾಲ್ಕನೇ ಅವಧಿಗೆ ಶಾಸಕನಾಗಿ ಆಯ್ಕೆಯಾಗಿರುವುದು ಅಭಿವೃದ್ಧಿ ಕೆಲಸಗಳಿಗೆ ಮತ್ತು ಕಾರ್ಯಕರ್ತರಿಗೆ ಸಿಕ್ಕ ಗೆಲುವಾಗಿದೆ ಎಂದು ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ.

ಕೇವಲ ಅಭಿವೃದ್ಧಿಯ ಸಂಕಲ್ಪದೊಂದಿಗೆ ಕೆಲಸ ಮಾಡಿದ್ದೇನೆ. ನನ್ನ ಕೆಲಸಕ್ಕೆ ಜನತೆ ಗೌರವ ನೀಡಿದ್ದಾರೆ. ಔರಾದನ ಆರಾಧ್ಯದೈವ ಅಮರೇಶ್ವರರ ಕೃಪೆಯಿಂದಾಗಿ ಮತ್ತು ಜನತೆಯ ಆಶೀರ್ವಾದದಿಂದಾಗಿ ನಾಲ್ಕನೇ ಅವಧಿಗೆ ಶಾಸಕನಾಗಿ ಆಯ್ಕೆಯಾಗಿದ್ದು, ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ. ಚುನಾವಣೆಯಲ್ಲಿ ಎದುರಾದ ಹಲವು ಅಡೆತಡೆಗಳ ನಡುವೆಯೂ ಜನತೆ ನನ್ನ ಕೈಬಿಟಿಲ್ಲ. ಎಲ್ಲ ಮಹಾಜನತೆಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ನನ್ನ ಗೆಲುವಿಗೆ ಪಕ್ಷದ ತಾಲ್ಲೂಕು ಅಧ್ಯಕ್ಷರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳು, ಬೂತ್ ಅಧ್ಯಕ್ಷರು ಒಳಗೊಂಡು ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾಕಷ್ಟು ಶ್ರಮ ವಹಿಸಿದ್ದಾರೆ. ಹೀಗೆ ನನ್ನ ಗೆಲುವಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಪ್ರಭು ಚವ್ಹಾಣ ಧನ್ಯವಾದ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು