ಕಲಬುರಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮೊವೊಂದರಲ್ಲಿ ಭಾಗಿಯಾಗಿರುವಾಗಲೇ ಕಲಬುರಗಿಯ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬಂದಿದೆ. ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಗಡಿಕೇಶ್ವರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಆದರೂ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಜನರು ಭಯದಿಂದ ಗ್ರಾಮ ಖಾಲಿ ಮಾಡಿ ಗುಳೆ ಹೋಗಿದ್ದಾರೆ. ನನಗೂ ಭೂಕಂಪದ ಶಬ್ದದ ಅನುಭವವಾಯಿತು. ಸರ್ಕಾರ ಜನರ ಸ್ಥಿತಿಯನ್ನು ಉದಾಸೀನವಾಗಿ ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಕೆಲ ದಿನಗಳಿಂದ ಕಲಬುರಗಿಯಲ್ಲಿ ಭೂಕಂಪನವಾಗುತ್ತಿದ್ದು ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಜತೆಗೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪೋನಾಯಿಸಿದ ಅವರು, ಗಡಿಕೇಶ್ವರ ಗ್ರಾಮದಲ್ಲಿ ಜನರು ಭಯಭೀತಿಗೊಳಗಾಗಿದ್ದಾರೆ. ಕೂಡಲೇ ಗ್ರಾಮದಲ್ಲಿ ಪುನರವಸತಿ ಕೇಂದ್ರ ಪ್ರಾರಂಭಿಸಿ. ಜನರಿಗೆ ಟೀನ್ ಶೆಡ್, ಬೆಡ್ ಸೀಟ್ ಕೊಡಲು ಹೇಳಿ. ಜಿಲ್ಲಾಧಿಕಾರಿಗೆ ಸೂಚನೆ ನೀಡಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.