News Kannada
Monday, March 20 2023

ಕಲಬುರಗಿ

ಕಾನೂನು ಸುವ್ಯವಸ್ಥೆ ನೋಡಿಕೊಂಡು ಶೀಘ್ರ ಕಾಲೇಜು ಪ್ರಾರಂಭ : ಅಶ್ವಥ್ ನಾರಾಯಣ್

Photo Credit :

ಕಲಬುರಗಿ: ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ನೋಡಿಕೊಂಡು ಅತೀ ಶೀಘ್ರದಲ್ಲೇ ಕಾಲೇಜುಗಳನ್ನು ಪ್ರಾರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು.

ಅವರು ಶನಿವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ಪ್ರಕರಣವು ನ್ಯಾಯಾಲಯದಲ್ಲಿರುವದಕ್ಕೂ ಶಾಲಾ,ಕಾಲೇಜುಗಳ ಪ್ರಾರಂಭಕ್ಕೂ ಸಂಬಂಧವಿಲ್ಲ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದರು.

ಸೋಮವಾರದಿಂದ 9 ಮತ್ತು 10ನೇ ತರಗತಿಗಳು ಪ್ರಾರಂಭವಾಗುತ್ತವೆ. ಅದರಂತೆ ಕಾಲೇಜುಗಳು ಸಹ ಪ್ರಾರಂಭ ಆಗಲಿವೆ ಎಂದರು. ಈಗ ಆನಲೈನ್ ತರಗತಿಗಳು ನಡೆಯುತ್ತಿವೆ. ಹೀಗಾಗಿ ಗೃಹ ಇಲಾಖೆ ಸಲಹೆ ಮೇರೆಗೆ ಶೀಘ್ರದಲ್ಲೇ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದರು.

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಹಿಜಾಬ್ ವಿವಾದ ಮಾಡುತ್ತಿದೆ ಎಂಬ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ವಿಚಾರದಲ್ಲಿ ಯಾರು ರಾಜಕೀಯ ಮಾಡುತ್ತಿದ್ದಾರೆ ಎಂಬುವುದನ್ನು ಮಾಧ್ಯಮಗಳಿಗೆ ಗೊತ್ತಿದೆ ಎಂದರು.

See also  ಪಿಎಸ್​ಐ ನೇಮಕಾತಿ ಅಕ್ರಮ: ಸಿಐಡಿ ತನಿಖೆಗೆ ನೀಡಿದ್ದೇವೆ- ಸಿಎಂ ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು