News Kannada
Saturday, April 01 2023

ಕಲಬುರಗಿ

ಮದುವೆ ಮೆರವಣಿಗೆ ಮೇಲೆ ಲಾರಿ ಹರಿದು ನಾಲ್ವರು ಸಾವು

Husband kills wife, cooks her in kadai
Photo Credit :

ಕಲಬುರ್ಗಿ: ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕಡತಾಲ ತಾಂಡಾದಲ್ಲಿ ಬುಧವಾರ ರಾತ್ರಿ ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದವರ ಮೇಲೆ ಡಿಜೆ ಲಾರಿ ಹರಿದು ನಾಲ್ವರು ಮೃತಪಟ್ಟಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸುಗುಣ ಬಾಯಿ ಚವಾಣ್(40), ವಿಜಿ ಬಾಯಿ ರಾಥೋಡ್(30), ಕುಮಾರನಾಯ್ಕ್(35) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಕಡತಾಲ ತಾಂಡಾದಲ್ಲಿ ನಿಗದಿಯಾಗಿದ್ದ ಮದುವೆಗೆ ಮದುಮಗಳನ್ನು ಕರೆದುಕೊಂಡು ಬಂದ ಸಂದರ್ಭದಲ್ಲಿ ಸಂಭ್ರಮದಿಂದ ಸ್ವಾಗತಿಸಲು ತೆಲಂಗಾಣದಿಂದ ಡಿಜೆ ತರಿಸಲಾಗಿತ್ತು. ಡ್ಯಾನ್ಸ್ ಮಾಡಿಕೊಂಡು ಮೆರವಣಿಗೆ ಸಾಗುತ್ತಿದ್ದ ವೇಳೆ ಸಂಬಂಧಿಕರು ನೆಂಟರು ಕುಣಿದು ಕುಪ್ಪಳಿಸುತ್ತಿದ್ದರು. ಆಗ ಡಿಜೆ ಇದ್ದ ಮಿನಿ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದುರಂತದಲ್ಲಿ 10 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಕಲಬುರಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಲಾರಿ ಚಾಲಕ ಇಲ್ಲದ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಚಾಲನೆ ಮಾಡಿದ್ದೇ ದುರಂತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

See also  ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ: ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು