ಕಲಬುರಗಿ: ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಆಡಳಿತಾವಧಿಯಲ್ಲಿ ಅತಿ ಹೆಚ್ಚು ಹಿಂದೂಗಳ ಹತ್ಯೆಯಾಗಿದೆ ಎಂದು ಆರೋಪಿಸಿದ್ದಾರೆ.
“ನಮ್ಮ ಅಧಿಕಾರಾವಧಿಯಲ್ಲಿ ಹಿಂದೂಗಳನ್ನು ಮಾತ್ರವಲ್ಲ, ಅಲ್ಪಸಂಖ್ಯಾತರನ್ನೂ ಕೊಲ್ಲಲಾಯಿತು. ಅವರೆಲ್ಲರೂ ವಿವಿಧ ಕಾರಣಗಳಿಗಾಗಿ ಕೊಲ್ಲಲ್ಪಟ್ಟಿರುತ್ತಾರೆ. ಕಾಂಗ್ರೆಸ್ ಅವಧಿಯಲ್ಲಿ ಹಿಂದೂಗಳ ಹತ್ಯೆಗೆ ಆರ್ ಎಸ್ ಎಸ್ ಮತ್ತು ಬಿಜೆಪಿ ಕಾರಣ” ಎಂದು ಅವರು ಹೇಳಿದರು.
ಪರೇಶ್ ಮೇಸ್ತ ಅನುಮಾನಾಸ್ಪದವಾಗಿ ಮೃತಪಟ್ಟಾಗ ಬಿಜೆಪಿ ನಾಯಕರು ಭಾರೀ ಕೋಲಾಹಲ ಸೃಷ್ಟಿಸಿದರು. ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಯಿತು. ನಂತರ ಏನಾಯಿತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಪರೇಶ್ ಮೇಸ್ತ ಅವರು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ಸಿಬಿಐ ವರದಿಯಲ್ಲಿ ತಿಳಿಸಲಾಗಿದೆ.
“ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸುಳ್ಳು ಹೇಳುವ ವ್ಯಕ್ತಿ. ಸುಳ್ಳುಗಳನ್ನು ಹರಡುವುದು ಅವರ ಕೆಲಸ. ನಾನು ಹಿಂದೂ. ನಾನು ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ ಮತ್ತು ಅದನ್ನು ವಿರೋಧಿಸಿಯೂ ಇಲ್ಲ. ಧರ್ಮದ ಚೌಕಟ್ಟಿನಲ್ಲಿ ಹಿಂಸೆಗೆ ಪ್ರಚೋದನೆಯನ್ನು ನೀಡುವುದು ಒಳ್ಳೆಯದಲ್ಲ. ಸಾಮರಸ್ಯವನ್ನು ಹಾಳುಮಾಡುವುದು ಬಿಜೆಪಿಯ ಗುರಿಯಾಗಿದೆ” ಎಂದು ಅವರು ಸಮರ್ಥಿಸಿಕೊಂಡರು.
ಪಾಕಿಸ್ತಾನದಿಂದ ಸ್ಪರ್ಧಿಸಿದರೆ ಮಾತ್ರ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲು ಸಾಧ್ಯ ಎಂಬ ಸಿ.ಟಿ.ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕರ್ನಾಟಕ ಪಾಕಿಸ್ತಾನದಲ್ಲಿದೆಯೇ ಅಥವಾ ಭಾರತದಲ್ಲಿ ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ ಅಥವಾ ಪಾಕಿಸ್ತಾನದಲ್ಲಿ ಚುನಾವಣೆ ನಡೆಯುತ್ತಿದೆಯೇ? ನೀವು ಏಕೆ ಕ್ಷುಲ್ಲಕ ಮಾತುಗಳಲ್ಲಿ ಆಡುತೀರಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.