ರಾಯಚೂರು: ರಸ್ತೆಯಲ್ಲಿ ಅಡ್ಡಬಂದಂತ ಎಮ್ಮೆಗೆ, ಬಸ್ ಡಿಕ್ಕಿಯನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಉರುಳಿ ಬಿದ್ದಿದೆ. ಈ ಪರಿಣಾಮದಿಂದಾಗಿ ಬಸ್ ನಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರೋ ಘಟನೆ ರಾಯಚೂರು-ತೆಲಂಗಾಣ ಗಡಿ ಭಾಗ ಕೃಷ್ಣಾ ಸೇತುವೆ ಬಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಹೈದ್ರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ವೊಂದು, ರಸ್ತೆಯಲ್ಲಿ ಅಡ್ಡಬಂದಂತ ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಆದ್ರೇ.. ಅದು ಸಾಧ್ಯವಾಗಿಲ್ಲ. ಹೀಗಾಗಿ ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿದೆ. ಅತ್ತ ಬಸ್ ಕೂಡ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಹೀಗೆ ರಾಯಚೂರು – ತೆಲಂಗಾಣದ ಗಡಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ, ಬಸ್ ನಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.