ಮಂಗಳೂರು: ನಗರ ಪೊಲೀಸರು ಅಂತರ್ ರಾಜ್ಯ ಮಟ್ಟದ ಮಾದಕವಸ್ತು ಪೂರೈಕೆ ಜಾಲವೊಂದನ್ನು ಭೇದಿಸಿ, ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಸುಮಾರು ಹತ್ತು ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಧರ್ಮನಗರ ನಿವಾಸಿ ಅಬೂಬಕ್ಕರ್ ಸಮದ್ ಅಲಿಯಾಸ್ ಸಮದ್(24), ವರ್ಕಾಡಿ ನಿವಾಸಿ ಮಹಮ್ಮದ್ ಅಸ್ತಫ್ ಅಲಿಯಾಸ್ ಅಶ್ರಫ್(30), ಕಡಂಬಾರು ದುರ್ಗಿಪಳ್ಯ ನಿವಾಸಿ ಮಹಮ್ಮದ್ ಅಫ್ರಿದ್(22) ಮತ್ತು ಮುಕ್ತಾಣ ನಿವಾಸಿ ಮಹಮದ್ ಅರ್ಷದ್(18) ಎಂಬವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆರೋಪಿಗಳಿಂದ ಒಂದು ಕಾರು, ಹತ್ತು ಕೆಜಿ ಗಾಂಜಾ ಮತ್ತು ಮೂರು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಅಂತರ್ ರಾಜ್ಯ ಮಟ್ಟದಲ್ಲಿ ಗಾಂಜಾ ಪೂರೈಕೆ ಜಾಲ ಹೊಂದಿದ್ದರು ಎಂದು ಅವರು ತಿಳಿಸಿದರು.