News Karnataka Kannada
Thursday, March 28 2024
Cricket
ಕರಾವಳಿ

ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಅರೆಸ್ಟ್

Photo Credit :

ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಅರೆಸ್ಟ್

ಬಂಟ್ವಾಳ: ಕಲ್ಲಡ್ಕ ದಲ್ಲಿ ಎಂಟು ತಿಂಗಳ ಹಿಂದೆ ನಡೆದ ಚೂರಿ ಹಿರಿತ ಪ್ರಕರಣದ ಆರೋಪಿ ಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ವೀರಕಂಭ ನಿವಾಸಿ ಕೇಶವ ಎಂಬಾತನಿಗೆ ಕಲ್ಲಡ್ಕ ದಲ್ಲಿ ಎಂಟು ತಿಂಗಳ ಹಿಂದೆ ಚೂರಿ ಇರಿತ ಮಾಡಿದ ಆರೋಪಿ ಫಾರೂಕ್ ಯಾನೆ ಚೆನ್ನ ಫಾರೂಕ್ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ.

ಈತನನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಚಂದ್ರಶೇಖರ್ , ಅಪರಾದ ವಿಭಾಗದ ಎಸ್.ಐ. ಹರೀಶ್, ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ನೇತೃತ್ವದಲ್ಲಿ ಕಲ್ಲಡ್ಕ ದ ಲ್ಲಿ ತೌಪೀಕ್ ಎಂಬಾತನ ಮನೆಯಿಂದ ಬಂಧಿಸಲಾಗಿದೆ. ಆರೋಪಿ ಫಾರೂಕ್ ಗೆ ಆಶ್ರಯ ನೀಡಿದ ಕಲ್ಲಡ್ಕ ನಿವಾಸಿ ತೌಪೀಕ್ ಎಂಬವನನ್ನು ಕೂಡಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಫಾರೂಕ್ ವಿರುದ್ದ ಈ ಹಿಂದೆ ಕಲ್ಲಡ್ಕ ದಲ್ಲಿ ನಡೆದ ಕೋಮು ಗಲಭೆಯ ಆರೋಪದ ಪ್ರಕರಣ ದಾಖಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು