ಮಂಗಳೂರು: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರ ನಿಷೇಧ ಆಗಬೇಕೆಂದು ವಿಶ್ವ ಹಿಂದೂ ಪರಿಷತ್ ನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದರು.
24ರಿಂದ ಉಡುಪಿಯಲ್ಲಿ ನಡೆಯುವ ಧರ್ಮ ಸಂಸದ್ ನಲ್ಲಿ ಭಾಗವಹಿಸಲು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ವೇಳೆ ಪತ್ರಕರ್ತರು ಪದ್ಮಾವತಿ ಚಿತ್ರದ ಕುರಿತು ಪ್ರಶ್ನಿಸಿದಾಗ “ ಪದ್ಮಾವತಿ ಚಿತ್ರವನ್ನು ನಿಷೇಧಿಸಬೇಕೆಂದರು’.
ಧರ್ಮ ಸಂಸದ್ ನಲ್ಲಿ ರಾಮ ಮಂದಿರ ಹಾಗೂ ಅಸ್ಪೃಶ್ಯತೆಯನ್ನು ಹೋಗಲಾಡಿಸುವ ಕುರಿತು ಚರ್ಚಿಸಲಾಗುವುದು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.