News Karnataka Kannada
Friday, March 29 2024
Cricket
ಕರಾವಳಿ

ಪರ್ಸಿನ್ ದೋಣಿ ದುರಂತ: ಮೃತರ ಕುಟುಂಬಸ್ಥರಿಗೆ ತಲಾ ₹ 6 ಲಕ್ಷ ಪರಿಹಾರ

Photo Credit :

ಪರ್ಸಿನ್ ದೋಣಿ ದುರಂತ: ಮೃತರ ಕುಟುಂಬಸ್ಥರಿಗೆ ತಲಾ ₹ 6 ಲಕ್ಷ ಪರಿಹಾರ

ಮಂಗಳೂರು: ಉಳ್ಳಾಲದಲ್ಲಿ ಸಂಭವಿಸಿದ್ದ ಪರ್ಸಿನ್ ದೋಣಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಲಾ ₹ 6 ಲಕ್ಷ ಪರಿಹಾರ ಮೊತ್ತದ ಮಂಜೂರಾತಿ ಪತ್ರಯನ್ನು ಗುರುವಾರ ಹಸ್ತಾಂತರಿಸಿದರು.

ಉಪ ಆಯುಕ್ತರ ಕಚೇರಿಯಲ್ಲಿ ಹಸ್ತಾಂತರಿಸಿದ ಅವರು, ಸರ್ಕಾರದಿಂದ ₹ 6 ಲಕ್ಷ ರೂ.ಗಳ ಪರಿಹಾರವನ್ನು ಮಾತ್ರ ಒದಗಿಸುವ ಅವಕಾಶವಿರುವುದರಿಂದ, ಅದನ್ನು ಸಂತ್ರಸ್ತರ ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತಿದೆ. ಇಂದು ಸರ್ಕಾರಿ ರಜಾದಿನವಾಗಿರುವುದರಿಂದ, ನಾಳೆ ವೇಳೆಗೆ ಪರಿಹಾರವನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ’ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸ್ಥಳೀಯ ಶಾಸಕರೊಂದಿಗೆ ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದೋಣಿ ದುರಂತದಲ್ಲಿ ಮಡಿದವರ ಪ್ರತಿ ಕುಟುಂಬಕ್ಕೆ 4 ಲಕ್ಷ ರೂ.ಗಳ ಹೆಚ್ಚುವರಿ ಪರಿಹಾರವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ. ಅಲ್ಲದೆ, ಮೀನುಗಾರಿಕೆ ಇಲಾಖೆಯಲ್ಲಿ ಲಭ್ಯವಿರುವ ಯಾವುದೇ ಸೌಲಭ್ಯಗಳು ಇದ್ದರೂ, ಅವುಗಳನ್ನು ಸಂತ್ರಸ್ತರ ಕುಟುಂಬ ಸದಸ್ಯರಿಗೆ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಪರ್ಸಿನ್ ದೋಣಿ ಶ್ರೀ ರಕ್ಷಾ’ ದುರಂತದ ಬಗ್ಗೆ ತನಿಖೆ ನಡೆಸಲು ಮತ್ತು ಮೀನುಗಾರಿಕೆ ವೇಳೆ ಜೀವ ರಕ್ಷಕ ಜಾಕೆಟ್‌ಗಳನ್ನು ಕಡ್ಡಾಯವಾಗಿ ಬಳಸಲು ಮೀನುಗಾರರಲ್ಲಿ ಜಾಗೃತಿ ಮೂಡಿಸಲು ಮೀನುಗಾರಿಕೆ ಇಲಾಖೆಯ ನಿರ್ದೇಶಕರಿಗೆ ಸೂಚನೆ ನೀಡುತ್ತೇನೆ ಎಂದು ಸಚಿವ ಪೂಜಾರಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು