News Karnataka Kannada
Thursday, April 25 2024
ಕರಾವಳಿ

ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು: ಸಚಿವ ಈಶ್ವರಪ್ಪ ಘೋಷಣೆ

Photo Credit :

ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು: ಸಚಿವ ಈಶ್ವರಪ್ಪ ಘೋಷಣೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 2 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.

ಗುರುವಾರ ಮಂಗಳೂರಿಗೆ  ಆಗಮಿಸಿದ ಸಚಿವರನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಭೇಟಿಯಾಗಿ ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃಧಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಸಂಘದ ಮನವಿಗೆ ಸ್ಪಂದಿಸಿದ ಸಚಿವರು ಸ್ಥಳದಲ್ಲೆ ಎರಡು ಕೋಟಿ ಅನುದಾನ ಮಂಜೂರು ಮಾಡಿ ಕ್ರಿಯಾ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಪತ್ರಕರ್ತರ ನಿಯೋಗದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಆತ್ಮಭೂಷಣ್, ಭಾಸ್ಕರ ರೈ ಕಟ್ಟ ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಇದ್ದರು.

 

10 ಕೋಟಿ ರೂ. ಪ್ಯಾಕೆಜ್ ಬಿಡುಗಡೆಗೆ ಸಿಎಂಗೆ ಮನವಿ

ಇದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ ನಿಯೋಗ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕಂದಾಯ ಸಚಿವ ಆರ್.ಅಶೋಕ್‍ರನ್ನು ಭೇಟಿಯಾಗಿ ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 10 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಸಿಎಂ ಮತ್ತು ಕಂದಾಯ ಸಚಿವರು ಪತ್ರಕರ್ತರ ಮನವಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಮಡಪ್ಪಾಡಿಯಲ್ಲಿ ಕಳೆದ ಜನವರಿ 5 ರಂದು ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 10 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು