ಮಂಗಳೂರು: ವಿದ್ಯಾರ್ಥಿಗಳಲ್ಲಿ ಪ್ರಕೃತಿ ಹಾಗೂ ಕಾಡುಗಳ ಬಗ್ಗೆ ಅರಿವು ಮೂಡಿಸಲು ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆ ಟ್ರೀ ಪ್ಲಾ0ಟೇಷನ್-2018 ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಈಚೆಗೆ ನೋಬಲ್ ಸ್ಕೂಲ್ ಕುಂಜತ್ತಬೈಲ್ ಮಂಗಳೂರು ಇಲ್ಲಿ ಈ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವರು ಹಾಗೂ ವಿಕಾಸ್ ಕಾಲೇಜಿನ ಸ್ಥಾಪಕ ಅಧ್ಯಕ್ಷರಾದ ಕೃಷ್ಣ ಜೆ ಪಾಲೆಮಾರ್ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ನೋಬಲ್ ಸ್ಕೂಲ್ನ ಮುಖ್ಯೋಪಾಧ್ಯಾಯರಾದ ಶ್ರೀಯುತ ಗೋಪಾಲಕೃಷ್ಣ ಭಟ್, ಗಣಿತ ಶಿಕ್ಷಕಿ ಶ್ರೀಶ, ವಿಕಾಸ್ ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ್ ಕನ್ಸೆಸೊ, ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಲಕ್ಷ್ಮೀಶ ಭಟ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಗಿಡಗಳನ್ನು ನೆಟ್ಟರು.