News Karnataka Kannada
Saturday, April 27 2024
ಕರಾವಳಿ

ಸ್ಫೋಟ ಸ್ಥಳದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ತನಿಖೆ ಚುರುಕು

Photo Credit :

ಸ್ಫೋಟ ಸ್ಥಳದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ತನಿಖೆ ಚುರುಕು

ಕಾರವಾರ: ಹೊನ್ನಾವರದ ಹೊಸಾಡದಲ್ಲಿ ಸೋಮವಾರ ಸ್ಪೋಟಕ ಸಿಡಿದ ಪ್ರದೇಶದಲ್ಲಿ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿದೆ. ಇದರೊಂದಿಗೆ ಸುತ್ತಲಿನ ಗಿಡ-ಮರಗಳ ಮೇಲೆ ಬಿಳಿ ಬಣ್ಣದ ಪುಡಿಗಳು ಕಂಡು ಬಂದಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಹೇಳಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು 80 ರಿಂದ 100 ಮೀಟರ್ ಅಂತರದಲ್ಲಿ ಈ ವಸ್ತು ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರೀಯ ದಳದವರು ವಸ್ತುವಿನ ಕುರಿತು ಅಧ್ಯಯನ ನಡೆಸುತ್ತಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದ ನಂತರ ಬಾಂಬ್ ನಿಷ್ಕ್ರೀಯ ದಳದವರು ಪಂಚನಾಮೆ ನಡೆಸಿ ದೊರೆತಿರುವ ವಸ್ತುವಿನ ಕುರಿತು ಪೊಲೀಸ್ ಇಲಾಖೆಗೆ ವರದಿ ನೀಡಲಿದ್ದಾರೆ. ಈಗಾಗಲೇ ಬಾಂಬ್ ನಿಷ್ಕ್ರೀಯ ದಳದವರು ಗಾಯಾಳುವಿನ ರಕ್ತದ ಮಾದರಿ, ಬಟ್ಟೆ ಹಾಗೂ ಸ್ಥಳದಲ್ಲಿ ಕೆಲ ಕುರುಹುಗಳನ್ನು ಸಂಗ್ರಹಿಸಿದ್ದಾರೆ.

ಆರೋಪಿತ ಗಾಯಾಳು ರೈಮಂಡ್ ಕೈತಾನ್ ಮಿರಾಂಡ್‌ಗೆ ಪ್ರಜ್ಞೆ ಬಂದಿದ್ದು, ವೈದ್ಯರ ಇನ್ನಷ್ಟು ಆರೈಕೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಯಾವುದೇ ವಿಚಾರಣೆ ನಡೆಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಪೀಟರ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಾಸಕ ಮಂಕಾಳು ವೈದ್ಯರಿಗೆ ಈಗಾಗಲೇ ಇಬ್ಬರು ಗನ್‌ಮ್ಯಾನ್‌ಗಳಿದ್ದು, ಅವರು ಏರಿದ್ದ ವೇದಿಕೆ ಸಮೀಪದಲ್ಲಿ ಸ್ಪೋಟಕ ಸಿಡಿದ ನಂತರ ಇನ್ನಷ್ಟು ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು