ಕಾಸರಗೋಡು: ಕುಂಬಳೆ ಉಳುವಾರಿನ ಫಾತಿಮ್ಮತ್ ಜುಹರಾಳ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಉಮ್ಮರ್ ಬ್ಯಾರಿ ತಪ್ಪಿತಸ್ಥನೆಂದು ಕಾಸರಗೋಡು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.
ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ 2006 ರ ಡಿಸೆಂಬರ್ 28 ರಂದು ಕುಂಬಳೆ ಸಮೀಪದ ಉಜಾರು ಉಳುವಾರಿನ ಫಾತಿಮತ್ ಜುಹಾರನ್ನು ಆರೋಪಿ ಉಮ್ಮರ್ ಬ್ಯಾರಿ ಕತ್ತು ಹಿಸುಕಿ ಕೊಲೆಗೈದು ಪರಾರಿಯಾಗಿದ್ದ. ಬಳಿಕ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಆತನನ್ನು ಘಟನೆ ನಡೆದ ಮರು ದಿನವೆ ಬಂಧಿಸಲಾಗಿತ್ತು. ಆದರೆ ನ್ಯಾಯಾಂಗ ಬಂಧನದಲ್ಲಿದ್ದ ಈತ ಜಾಮೀನು ಪಡೆದು ಹೊರಬಂದ ಬಳಿಕ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ತದನಂತರ 2014 ರ ಅಗಸ್ಟ್ 28 ರಂದು ಈತನನ್ನು ಮಹಾರಾಷ್ಟ್ರದ ನಾಸಿಕ್ ನಿಂದ ಬಂಧಿಸಲಾಗಿತ್ತು. ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ ಎಂಟರಂದು ನ್ಯಾಯಾಲಯ ಘೋಷಿಸಲಿದೆ.