ಕಾಸರಗೋಡು: ಕಾರು-ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಕುಂಬಳೆ-ಬದಿಯಡ್ಕ ರಸ್ತೆಯ ಸೀತಾಂಗೋಳಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ನೀರ್ಚಾಲು ಕನ್ಯಪ್ಪಾಡಿ ತಲ್ಪಣಾಜೆಯ ಜಯಶಂಕರ (೩೧) ಎಂದು ಗುರುತಿಸಲಾಗಿದೆ.
ಸಹಸವಾರ ಮುಳ್ಳೇರಿಯ ಕೋಳಿಕ್ಕಾಲ್ ನ ರವಿ (೩೪) ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಬದಿಯಡ್ಕದ ವೈದ್ಯ ಡಾ. ಪ್ರದೀಪ್ ಗಾಯಗೊಂಡಿದ್ದಾರೆ.
ಶುಕ್ರವಾರ ರಾತ್ರಿ ಸೀತಾಂಗೋಳಿ ಪೆಟ್ರೋಲ್ ಬಂಕ್ ಬಳಿ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರರಿಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಜಯಶಂಕರ ಶನಿವಾರ ಮೃತಪಟ್ಟರು.
ಇಬ್ಬರೂ ಇಲೆಕ್ಟ್ರಾನಿಕ್ಸ್ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.