ಬೆಳ್ತಂಗಡಿ: ಅಕ್ರಮ ಗೋಸಾಗಾಟವನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಬುಧವಾರ ಪತ್ತೆ ಹಚ್ಚಿದ್ದಾರೆ. ಬಳಿಕ ಪೋಲಿಸರು ಹಸುಗಳನ್ನು ಹಾಗು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.
ಮುಂಜಾನೆ ಮೂಡಿಗೆರೆಯಿಂದ ಮಂಗಳೂರಿನ ಕಡೆ ಎರಡು ವಾಹನಗಳಲ್ಲಿ ಅಮಾನುಷ ರೀತಿಯಲ್ಲಿ ಗೋವುಗಳನ್ನು ಕಟ್ಟಿಹಾಕಿ ಸಾಗಾಟ ಮಾಡುತ್ತಿದ್ದರು. ಇದನ್ನು ಚಾರ್ಮಾಡಿಯಲ್ಲಿ ಸ್ಥಳೀಯ ಹಿಂದೂ ಸಂಘಟನೆ ಕಾರ್ಯಕರ್ತರ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ 2 ಝೈಲೋ ವಾಹನ ಮತ್ತು 9 ದನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.