News Kannada
Tuesday, March 21 2023

ಕರಾವಳಿ

ಕೆಎಸ್ ಆರ್ ಟಿಸಿ ಬಸ್ ನಡಿಗೆ ಸಿಲುಕಿ ತಾಯಿ-ಮಗು ಸಾವು

Photo Credit :

ಕೆಎಸ್ ಆರ್ ಟಿಸಿ ಬಸ್ ನಡಿಗೆ ಸಿಲುಕಿ ತಾಯಿ-ಮಗು ಸಾವು

ಕಾಸರಗೋಡು: ಕೆಎಸ್ ಆರ್ ಟಿಸಿ ಬಸ್ ನಡಿಗೆ ಸಿಲುಕಿ ತಾಯಿ ಮತ್ತು ಎಂಟು ತಿಂಗಳ ಮಗು ದಾರುಣವಾಗಿ ಮೃತಪಟ್ಟ ಘಟನೆ ಆದಿತ್ಯವಾರ ಮಧ್ಯಾಹ್ನ ಪೆರ್ಲಡ್ಕದಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಾನತ್ತೂರಿನ  ರಜನಿ(30), ಪುತ್ರ ಋತುವೇದ ಎಂದು ಗುರುತಿಸಲಾಗಿದೆ. ಜೊತೆಗಿದ್ದ ರಜನಿಯ ತಾಯಿ ರೋಹಿಣಿ ಮತ್ತು ರಜನಿಯ ಪುತ್ರಿ ಅತಿಕಾ (3)  ಗಾಯಗೊಂಡಿದ್ದು, ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ದು ಕಲ್ಲಳ್ಳಿಯಿಂದ ಕಾಸರಗೋಡಿಗೆ ಬರುತ್ತಿದ್ದ  ಕೆಎಸ್ಆರ್ಟಿಸಿ ಬಸ್ಸಿಗೆ ಹತ್ತುತ್ತಿದ್ದಾಗ ಬಸ್ಸು ಒಮ್ಮೆಲೇ ಮುಂದಕ್ಕೆ ಚಲಾಯಿಸಿದ್ದು, ಈ ಸಂದರ್ಭದಲ್ಲಿ ಬಸ್ಸಿನ ಹಿಂಬದಿ ಟಯರ್ ನಡಿ ಸಿಲುಕಿದ ತಾಯಿ ಮತ್ತು ಮಗು ಮೃತಪಟ್ಟರೆ ಇಬ್ಬರು ಗಾಯಗೊಂಡರು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಬೊಬ್ಬೆ ಹಾಕಿದಾರೂ ಚಾಲಕ ಬಸ್ಸು ಮುಂದಕ್ಕೆ ಚಲಾಯಿಸಿದ್ದರಿಂದ ದಾರುಣ ಘಟನೆ ನಡೆದಿದೆ. ರಜನಿ ಯು ಪೆರ್ಲಡ್ಕದಲ್ಲಿರುವ ಸಂಬಂಧಿಕರ ಮನೆಗೆ ತೆರಳಿ  ಇಬ್ಬರು ಮಕ್ಕಳು ಮತ್ತು ತಾಯಿ ಜೊತೆ ಮರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಚಾಲಕನ ನಿರ್ಲಕ್ಷ್ಯ ಘಟನೆಗೆ ಕಾರಣವೆನ್ನಲಾಗಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಬೆಳ್ತಂಗಡಿ: ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕೂಬಿಂಗ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು