News Kannada
Saturday, April 01 2023

ಕರಾವಳಿ

ಮಲಯಾಳ ಕಡ್ಡಾಯ ಆದೇಶ ಪ್ರತಿಭಟಿಸಿ ಕೇರಳ ಪ್ರಾಂತ್ಯ ಕನ್ನಡ ಅಧ್ಯಾಪಕರ ಸಂಘದಿಂದ ಉಪವಾಸ ಸತ್ಯಾಗ್ರಹ

Photo Credit :

ಮಲಯಾಳ ಕಡ್ಡಾಯ ಆದೇಶ ಪ್ರತಿಭಟಿಸಿ ಕೇರಳ ಪ್ರಾಂತ್ಯ ಕನ್ನಡ ಅಧ್ಯಾಪಕರ ಸಂಘದಿಂದ ಉಪವಾಸ ಸತ್ಯಾಗ್ರಹ

ಕಾಸರಗೋಡು: ಕೇರಳ ಸರಕಾರದ ಮಲಯಾಳ ಕಡ್ಡಾಯ ಆದೇಶವನ್ನು ಪ್ರತಿಭಟಿಸಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಸಮಿತಿ ವತಿಯಿಂದ ಉಪ್ಪಳ ನಯಾಬಜಾರ್ನಲ್ಲಿರುವ ಮಂಜೇಶ್ವರ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗದಲ್ಲಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಸತ್ಯಾಗ್ರಹದಲ್ಲಿ ಅಧ್ಯಾಪಕರು, ಕನ್ನಡ ಪರ ಸಂಘಟನೆ ಹಾಗೂ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು. ಸತ್ಯಾಗ್ರಹವನ್ನು ಗೋಪಾಲ ಶೆಟ್ಟಿ ಅರಿಬೈಲ್ ಉದ್ಘಾಟಿಸಿದರು. ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು.

ಟಿ.ಡಿ ಸದಾಶಿವ ರಾವ್, ಸತ್ಯನಾರಾಯಣ ಭಟ್, ಚಂದ್ರಹಾಸ, ಎಂ.ಜಿ ನಾರಾಯಣ ರಾವ್, ಅಶೋಕ್ ಕೊಡ್ಲಮೊಗರು ಮೊದಲಾದವರು ನೇತೃತ್ವ ನೀಡಿದರು. ಬದಿಯಡ್ಕದಲ್ಲಿರುವ ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗದಲ್ಲೂ ಧರಣಿ ನಡೆಸಲಾಯಿತು.
ಮೇ ಒಂದರಿಂದ ಕೇರಳದಲ್ಲಿ ಮಲಯಾಳ ಭಾಷೆಯನ್ನು ಕಡ್ಡಾಯ ಗೊಳಿಸಿದ್ದು, ಭಾಷಾ ಅಲ್ಪಸಂಖ್ಯಾತ ಕಾಸರಗೋಡಿಗೆ ವಿನಾಯಿತಿ ನೀಡುವಂತೆ ಕನ್ನಡ ಪರ ಸಂಘಟನೆಗೆಳು ಪ್ರತಿಭಟನೆಗೆ ಮುಂದಾಗಿವೆ.

See also  ಸುಬ್ರಹ್ಮಣ್ಯದಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು